ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್