ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600