ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ