ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ