ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ