ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ