ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು