A grand opening of the school

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ನಾಗಬೇನಾಳ ತಾಂಡಾ: ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಗಬೇನಾಳ ತಾಂಡಾದಲ್ಲಿ ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ ಮಾಡಲಾಯಿತು.

ಮಕ್ಕಳಿಗೆ ಬೇಸಿಗೆ ರಜೆಗಳ ನಂತರ ಇಂದು ಶಾಲೆಗೆ ಬರುವ ಮುದ್ದು ಮಕ್ಕಳನ್ನು ಹೂಗುಚ್ಛ ಕೊಟ್ಟು ಬರಮಾಡಿಕೊಳ್ಳಲಾಯಿತು.

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ನಾಗಬೇನಾಳ ತಾಂಡಾದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತು ದೇಶ ಸೇವೆ ಮಾಡುತ್ತಿರುವ ಸೈನಿಕರಾದ ವೆಂಕಟೇಶ ಸೇವಪ್ಪ ನಾಯಕ್, ರಾಜು ಕೀರಪ್ಪ. ಚವಾಣ್ ಇವರಿಗೆ ಗೌರವ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಪದ್ಮಾವತಿ ರವಿ ಲಮಾಣಿ, ನವೀನ ನಾಯಕ್ 2024 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಂಕ ಪಡೆದಿದ್ದಕ್ಕಾಗಿ ಸನ್ಮಾನಿಸಲಾಯಿತು.ಜೊತೆಗೆ ವೈಷ್ಣವಿ ಮಹಾದೇವಪ್ಪ ನಾಯಕ, (ಮುರಾರ್ಜಿ ದೇಸಾಯಿ, ನವೋದಯ, ಕಿತ್ತೂರು, ಸೈನಿಕ ಶಾಲೆ,ಆರ್ ಎಂ ಎಸ್ ಎ)ಎಲ್ಲಾ ಪರೀಕ್ಷೆಗಳಲ್ಲಿ ಆಯ್ಕೆಗೊಂಡು ಕೊನೆಗೆ ನವೋದಯ ಶಾಲೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸನ್ಮಾನಿಸಲಾಯಿತು.

ಶಾಲೆಯ ಆದರ್ಶ ವಿದ್ಯಾರ್ಥಿ ರೋಷನ್ ಕುಮಾರ್ ಕೋಳೂರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಾನಂದ ಕೃಷ್ಣಪ್ಪ ನಾಯಕ್ ಮತ್ತು ಗ್ರಾಮ ಪಂಚಾಯತಿಯ ಸದಸ್ಯರಾದ ರಘು ಪವಾರ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳು ಶಿವಲೀಲಾ ಗಂಗನಗೌಡರ, ಶಿಕ್ಷಕರು ಪಾಲಕರು ಶಿಕ್ಷಣ ಪ್ರೇಮಿಗಳಾದ ಮಹಾದೇವಪ್ಪ ನಾಯಕ, ಶಿಕ್ಷಕರು ಗೋವಿಂದ ನಾಯಕ್, ವೆಂಕಟೇಶ್ ನಾಯಕ್, ಜಗದೇವ ನಾಯಕ್ ಇತರರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಪ್ರಿಯಾ ಯರನಾಳ ಗುರುಮಾತೆಯರು ಸ್ವಾಗತಿಸಿದರು. ವೀರೇಶ್ ನವಲಿ ಶಿಕ್ಷಕರು ನಿರೂಪಿಸಿದರು. ಅಕ್ಕಮಹಾದೇವಿ ಉಪನಾಳ ಗುರುಮಾತೆಯರು ವಂದಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಬಿಸಿಊಟ ಬಾಳೆಹಣ್ಣು ವಿತರಿಸಲಾಯಿತು.

ವರದಿಗಾರ : ಶಿವು ರಾಠೋಡ

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ