ಮುದ್ದೇಬಿಹಾಳ : ಭಾರತೀಯ ಸೇನೆಯಲ್ಲಿ ಸೇನಾಧಿಕಾರಿಯಾಗಿ 36 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ಮರಳಿದ ಶಿವಾನಂದ ಬಿ. ಬಿರಾದಾರ ಅವರನ್ನು ಭಾನುವಾರ ಮಾಜಿ ಸೈನಿಕರು, ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಸಾಗಿ ಸ್ವಗ್ರಾಮ ಬಳವಾಟಕ್ಕೆ ಬೀಳ್ಕೊಡಲಾಯಿತು. ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಮುಖಂಡರಾದ ಸತೀಶ ಓಸ್ವಾಲ್, ಸಂಗನಗೌಡ ಬಿರಾದಾರ, ಎಂ. ಬಿ. ನಾವದಗಿ, ಆರ್. ಎಸ್. ಪಾಟೀಲ ಕೂಚಬಾಳ, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಇದ್ದರು.