A life without sports is like a fruit eaten by an insect - A.C. Kerura

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ – ಎ.ಸಿ.ಕೆರೂರ

ಅಡವಿ ಹುಲಗಬಾಳ : ಅಹಿಲ್ಯದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಡವಿ ಹುಲುಗಬಾಳದಲ್ಲಿ 2025-26 ನೇ ಸಾಲಿನ ನಾಲತವಾಡ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವು ಜರುಗಿದವು. ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ, ಮನುಷ್ಯ ಸದೃಢವಾಗಿ ಇರಬೇಕೆಂದರೆ ಪ್ರತಿದಿನ ಯೋಗ, ಕ್ರೀಡೆಯಲ್ಲಿ ಭಾಗವಹಿಸುವುದು ಅತಿ ಮುಖ್ಯ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಎನ್ನುವಂತೆ, ದೇಹವನ್ನು ದಂಡಿಸಿದಾಗ ಮಾತ್ರ ಆರೋಗ್ಯದಿಂದಿರಲು ಸಾಧ್ಯ.

ಈಗ ಎಲ್ಲರೂ ಯಂತ್ರಗಳಿಗೆ ಮೊರೆ ಹೋಗುವುದರಿಂದ ದೇಹವನ್ನು ದಂಡಿಸಲು ಆಗುತ್ತಿಲ್ಲ. ಹಾಗಾಗಿ ರೋಗ-ರುಜಿನುಗಳಿಗೆ ಅಣಿ ಆಗುತ್ತಿದ್ದಾನೆ. ಸೋಲು ಗೆಲುವನ್ನು ಸಮಾನತೆಯಿಂದ ಕಾಣುವ ಗುಣವನ್ನು ಹೊಂದಿರಬೇಕು. ಕ್ರೀಡಾಪಟುಗಳೊಂದಿಗೆ ಬಂದಂತಹ ಹಿತೈಷಿಗಳು ಯಾವುದೇ ರೀತಿಯಾಗಿ ಜಗಳಕ್ಕೆ ಅಣಿಯಾಗದಂತೆ, ಕ್ರೀಡೆಯಲ್ಲಿ ಭಾಗವಹಿಸಬೇಕು. ಈ ವರ್ಷ ಅರ್ಹತಾ ಪ್ರಮಾಣ ಪತ್ರವನ್ನು ಆನ್ಲೈನ್ ಮುಖಾಂತರವಾಗಿ ತೆಗೆದುಕೊಳ್ಳುತ್ತಿರುವುದರಿಂದ ಬೇರೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸಲು ಕಡಿವಾಣವನ್ನು ಸರಕಾರ ಹಾಕಿದ್ದು ತುಂಬಾ ಸಂತೋಷ. ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿರ್ಣಾಯಕರು ಕೊಟ್ಟಂತಹ ನಿರ್ಣಯಗಳಿಗೆ ಬದ್ಧರಾಗಬೇಕು. ನಿರ್ಣಾಯಕರು ಸಹ ನೀಡುವ ತೀರ್ಪು ಎಲ್ಲರೂ ಒಪ್ಪುವಂತಿರಬೇಕು. ಒಳ್ಳೆಯ ಮತ್ತು ನೈಜ ಪ್ರತಿಭಾವಂತ ಕ್ರೀಡಾಪಟುಗಳನ್ನು ವಲಯ, ತಾಲೂಕು, ಜಿಲ್ಲಾ , ವಿಭಾಗ, ರಾಜ್ಯ ಮಟ್ಟಕ್ಕೆ ಕಳಿಸುವರು ನಾವು ಆಗಬೇಕು. ಆಡಿಸುವರ ಕಣ್ಣು ಎರಡು ಆದರೆ ನೋಡುವವರ ಕಣ್ಣು ನೂರಾರು ಆಗಿರುತ್ತವೆ, ಹಾಗಾಗಿ ತೀರ್ಪು ನ್ಯಾಯ ಸಮ್ಮತವಾಗಿರಬೇಕು ಎಲ್ಲ ಮಕ್ಕಳು ನಮ್ಮ ಶಾಲೆಯ ಮಕ್ಕಳು ಎಂದು ನಿರ್ಣಯವನ್ನು ನೀಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸರ್ಕಾರಿ ಗ್ರೇಡ್ -1 ದೈಹಿಕ ಶಿಕ್ಷಕರ ಸಂಘ,ಮುದ್ದೇಬಿಹಾಳ ಅಧ್ಯಕ್ಷರಾದ ಎ.ಸಿ.ಕೆರೂರ ಹೇಳಿದರು.
ಇನ್ನೋರ್ವ ಅತಿಥಿಯಾಗಿ ಆಗಮಿಸಿದ್ದ ರಾಹುತ ಪೂಜಾರಿ ಅಧ್ಯಕ್ಷರು ದೈ.ಶಿ.ಶಿ. ಸಂಘ ತಾಳಿಕೋಟೆ ಎಲ್ಲಿ ಕ್ರೀಡಾಂಗಣಗಳು ಕ್ರೀಡಾಪಟುಗಳಿಂದ ತುಂಬಿರುತ್ತವೆ ಆ ಊರಲ್ಲಿ ಆಸ್ಪತ್ರೆಗಳು ಖಾಲಿ ಖಾಲಿ ಇರುತ್ತವೆ, ಕ್ರೀಡೆ, ಕ್ರೀಡಾ ಸ್ಪೂರ್ತಿಯಿಂದ ನ್ಯಾಯಯುತವಾಗಿ ಮಾಡಬೇಕು, ಆಟದಿಂದ ನಾಯಕತ್ವವನ್ನು ಹೊಂದಾಣಿಕೆ ಗುಣ ಬೆಳೆಸಿಕೊಳ್ಳಬೇಕು ಹೊರತು ಸಿಟ್ಟು, ದ್ವೇಷ, ಗುಣದಿಂದ ದೂರ ಇರಬೇಕು.

ಈ ವಲಯದ ಕ್ರೀಡಾಪಟುಗಳು ರಾಜ್ಯಮಟ್ಟದವರೆಗೆ ಆಡಿ ನಮ್ಮ ವಲಯದ ಕೀರ್ತಿಯನ್ನು ತರಬೇಕು ಎಂದು ಅಧ್ಯಕ್ಷತೆ ವಹಿಸಿದ ಕಿರಣ್ ಮದರಿ , ಅಧ್ಯಕ್ಷರು ಅಹಿಲ್ಯ ದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಡವಿ ಹುಲಗಬಾಳ ಶುಭವನ್ನು ಕೋರಿದರು . ಕ್ರೀಡಾ ಧ್ವಜಾರೋಹಣವನ್ನು ಅಂಬರೀಶ್ ಮದರಿ, ನಿರ್ದೇಶಕರು ಅಹಿಲ್ಯ ದೇವಿ ಶಿಕ್ಷಣ ಸಂಸ್ಥೆ ಅಡವಿ ನಿರ್ವಹಿಸಿದರು, ವೇದಿಕೆ ಮೇಲಿದ್ದ ಕಿರಣ್ ಮದರಿ , ಎ.ಸಿ.ಕೆರೂರ, ಎಂ.ಎಸ್.ಗುಡಗುಂಟಿ ಮುಖ್ಯ ಗುರುಗಳು ಸರ್ಕಾರಿ ಪ್ರೌಢಶಾಲೆ ಅಡವಿ ಹುಲುಗಬಾಳ, ಬಿ.ಬಿ.ಪೂಜಾರಿ, ರಾಹುತ್ ಪೂಜಾರಿ, ಮಲ್ಲಿಕಾರ್ಜುನ ರಾಯಗೊಂಡ, ಪಾರಿವಾಳಗಳನ್ನು ಹಾರಿ ಬಿಡುವುದರಿಂದ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು .
ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಶ್ರೀಮತಿ.ರೇಖಾ ಹಿರೇಮಠ, ಸ್ವಾಗತವನ್ನು ಬಿ.ಕೆ.ಪೂಜಾರಿ ಮುಖ್ಯ ಗುರುಗಳು ಅಭ್ಯುದಯ ಪ್ರೌಢಶಾಲೆ ಅಡವಿ ಹುಳಗಬಾಳ, ನಿರೂಪಣೆ ಬಿ.ಬಿ.ತಳವಾರ ಶಿಕ್ಷಕರು ಅಭ್ಯುದಯ ಪ್ರೌಢಶಾಲೆ ಅಡವಿಹುಲಗಬಾಳ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ವಲಯದ ಕ್ರೀಡಾಪಟುಗಳು ತಂಡದ ವ್ಯವಸ್ಥಾಪಕರು ಮತ್ತು ನಿರ್ಣಾಯಕರಾಗಿ, ವೀರೇಶ್ ಗದಗ, ಮೋಹನ್ .ಬಿ.ಪಾಟೀಲ್, ಬಲಭೀಮ ಮಾದರ್, ಎಸ್. ಎಸ್.ಹಿರೇಮಠ್ , ಎಸ್.ಪಿ.ಹಂಡರಗಲ್, ಪ್ರಕಾಶ್ ಜಂಬಿಗಿ, ಎನ್.ವಿ. ಪತ್ತಾರ್, ಎಚ್.ಎಲ್. ಭಜಂತ್ರಿ, ಎಚ್.ಕೆ.ನಾಟಿಕರ್, ವಿಶ್ವನಾಥ್ ಪಾಟೀಲ್, ಬಸವರಾಜ್ ಚಳ್ಳಗಿ, ಡಿ.ಎ.ಜಾವೂರ್, ಡಿ.ಎ.ಮಂಕಣಿ, ಶ್ರೀಮತಿ ಗೀತಾ ಯರಂತಲಿಮಠ, ಶ್ರೀಮತಿ ಡಿ.ಬಿ.ಪೂಜಾರಿ, ಮುಂತಾದವರು ಭಾಗವಹಿಸಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ