ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದು ಶವವನ್ನು ಕೃಷ್ಣಾ ನದಿಗೆ ಎಸೆಯಲು ಮುಂದಾಗಿದ್ದ ವೇಳೆ ಸಾರ್ವಜನಿಕರನ್ನು ಕಂಡು ಶವ ಅಲ್ಲಿಯೇ ಬಿಟ್ಟು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ತಾಲ್ಲೂಕಿನ ತಂಗಡಗಿ ಕೃಷ್ಣಾ ನದಿ ಬಳಿ ಮೇ.13 ರಂದು ಮಧ್ಯರಾತ್ರಿ ಜರುಗಿದೆ.

ಘಟನೆ ವಿವರ : ಮೂಲತಃ ತೇರದಾಳದ ಸದ್ಯಕ್ಕೆ ಹುನಗುಂದ ತಾಲ್ಲೂಕು ಮರೋಳದಲ್ಲಿ ವಾಸಿಸುತ್ತಿದ್ದ ಸಮ್ಮೇದ ವಿಜಯ ಸಾಬಣ್ಣವರ ಹಾಗೂ ಸವದತ್ತಿ ತಾಲ್ಲೂಕು ಅರ್ಟಗಲ್ ಗ್ರಾಮದ ವಿವಾಹಿತೆ ಮಹಿಳೆ ಗಂಗವ್ವ ಸುನೀಲ ತ್ಯಾಪಿ ಮಧ್ಯೆ ಅನೈತಿಕ ಸಂಬoಧ ಬೆಳೆದಿತ್ತು.
ಆರೋಪಿತ ಸಮ್ಮೇದನು ಬೇರೆ ಹುಡುಗಿಗೆ ಮದುವೆ ಮಾಡಿಕೊಳ್ಳಲು ಆತ ಪ್ರೀತಿಸುತ್ತಿದ್ದ ಗಂಗವ್ವ ತಕರಾರು ಮಾಡಿದ್ದನ್ನು ಸಹಿಸಲಾಗದೇ ಆಕೆಯನ್ನು ಮರೋಳ ಗ್ರಾಮದ ಹತ್ತಿರ ತಾನು ಪಾಲು ಮಾಡಿರುವ ಮಹಾಂತೇಶ ಮಡಿವಾಳರ ಇವರ ಹೊಲದಲ್ಲಿ ಮೇ.13 ರಂದು ರಾತ್ರಿ 8 ಗಂಟೆಗೆ ಅವಳಿಗೆ ಹೊಡೆದು ಕೊಲೆ ಮಾಡಿ ಅವಳಿಗೆ ತನ್ನ ಮೋಟಾರ್ ಸೈಕಲ್ ಮೇಲೆ ತಂಗಡಗಿ ಸೇತುವೆ ಮೇಲೆ ತಂದು ಅವಳ ಶವವನ್ನು ಬ್ರಿಡ್ಜ್ದ ಮೇಲಿಂದ ಒಗೆಯಲು ಶವವನ್ನು ಇಳಿಸುವ ಸಮಯದಲ್ಲಿ ಅಲ್ಲಿ ಕೆಲವು ಜನರು ನೋಡಿ ಅವನ ಬೆನ್ನು ಹತ್ತಿ ಕೂಗಿದಾಗ ಆತನು ಆಕೆಯ ಶವವನ್ನು ಹಾಗೂ ಮೋಟಾರ್ ಸೈಕಲ್‌ನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬoಧಿಸಿದoತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಮೇಲೆ 8 ಕಿ.ಮೀ ದೂರ ಶವ ಹೊತ್ತು ತಂದ ಆರೋಪಿ:
ಆರೋಪಿ ಸಮ್ಮೇದ ತಾನು ಕೊಲೆ ಮಾಡಿದ ಗಂಗವ್ವಳ ಶವವನ್ನು ಮರೋಳದಿಂದ ತಂಗಡಗಿ ಗ್ರಾಮದ ಬ್ರಿಡ್ಜ್ವರೆಗೆ ಬೈಕ್ ಮೇಲೆ ತಂದಿದ್ದಾನೆ.ಮರೋಳದಿoದ ತಂಗಡಗಿ ಸೇತುವೆ ಸುಮಾರು 8 ಕಿ.ಮೀ ಅಂತರವಿದ್ದು ಅಲ್ಲಿಂದ ಒಬ್ಬನೇ ಬೈಕ್ ಮೇಲೆ ಆಕೆಯ ಶವವನ್ನು ಹೊತ್ತುಕೊಂಡು ತಂದಿರುವ ಆಘಾತಕಾರಿ ಸಂಗತಿಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ