ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು



ನಾಲತವಾಡ : ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಲತವಾಡ ಪಟ್ಟಣದ ಪೆಟ್ರೋಲ್ ಪಂಪ್ ಹತ್ತಿರ ಗುರುವಾರ ಸಂಭವಿಸಿದೆ.


ಮೃತಪಟ್ಟ ವ್ಯಕ್ತಿಯನ್ನು ಲಿಂಗಸಗೂರು ತಾಲ್ಲೂಕಿನ ನಾಗರಾಳದ ಶಿವಪುತ್ರಪ್ಪ ಸಿದ್ದಪ್ಪ ಭಜಂತ್ರಿ(50)ಎAದು ಗುರುತಿಸಲಾಗಿದೆ.ಬಿಹಾರ ಮೂಲದ ಚಂಪಾರಣ ಈಸ್ಟ್ ಮೋತಿಹರಿ ಹರದಿಯಾ ನಿವಾಸಿ ಜಲ್ಫೆಕರಲಿ ಹಫೀಜುಲ್ಲಾ ಮಿಯಾ ತಾನು ಚಲಾಯಿಸುತ್ತಿದ್ದ ಕ್ರೇನ್ ವಾಹನವನ್ನು ಅತೀ ವೇಗದಿಂದ ಅಜಾಗರೂಕತೆಯಿಂದ ಚಲಾಯಿಸಿಕೊಂಡು ನಾಲತವಾಡದಿಂದ ನಾರಾಯಣಪೂರ ಕಡೆಗೆ ತೆರಳುತ್ತಿದ್ದ ಈ ವೇಳೆ ರಸ್ತೆ ಬದಿ ನಿಂತಿದ್ದ ಶಿವಪುತ್ರಪ್ಪ ಭಜಂತ್ರಿ ಮೇಲೆ ಹಾಯಿಸಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪತ್ನಿ ಶಂಕ್ರಮ್ಮ ಭಜಂತ್ರಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Latest News

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಖರ್ಗೆಯವರು ತಮ್ಮ ಪತ್ರದಲ್ಲಿ ಎಲ್ಲಿಯೂ ಆರ್.ಎಸ್.ಎಸ್ ನಿಷೇಧಿಸಬೇಕು ಎಂದು ಹೇಳಿರಲಿಲ್ಲ.ಆದರೆ ಆ ಸಂಘಟನೆಯ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದರು.ಇದರ ಬಳಿಕ ಕೆಲವರು ಸಚಿವ ಖರ್ಗೆ ಅವರಿಗೆ ಕರೆ