A member who unraveled a series of problems in the Hescom office premises

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ನೋಡಿಕೊಂಡೇ ಬಂದಿದ್ದು ಸರಿಯಾದ ಸ್ಪಂದನೆ ಸಿಗುವುದಿಲ್ಲ. ಇಲ್ಲಿ ‘ಹಲವು ರೀತಿಯ ವ್ಯವಹಾರ’ ನಡೆಯುತ್ತವೆ ಎಂದು ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯೆ ಕವಿತಾ ದಡ್ಡಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಹಕರ ಸಲಹಾ ಸಮಿತಿಗೆ ನೇಮಕಗೊಂಡ ನೂತನ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಲ್ಲಿನ ಹೆಸ್ಕಾಂ ಕಚೇರಿ ಆವರಣದಲ್ಲಿರುವ ಆಲದಮರದ ಕಟ್ಟೆ,ಈಶ್ವರ ಗುಡಿಯಲ್ಲಿ ಅನಧಿಕೃತ ವ್ಯಕ್ತಿಗಳು ಇಸ್ಪೀಟ್ ಆಡುತ್ತಾ ಕೂರುತ್ತಾರೆ. ಕಚೇರಿಗೆ ಬಿಲ್ ತುಂಬಲು ಬರುವ ಮಹಿಳೆಯರು ಮುಜುಗರದಿಂದ ಕಚೇರಿಗೆ ಬರುವ ದುಸ್ಥಿತಿ ಇದೆ. ಕಚೇರಿಯಲ್ಲಿ ಯಾವುದಕ್ಕೂ ಸರಿಯಾದ ಸ್ಪಂದನೆ ಸಿಗುವುದಿಲ್ಲ. ಗ್ರಾಹಕರಿಗೆ ಒಳ್ಳೆಯ ಸೇವೆ ಕೊಡುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.

ಹೆಸ್ಕಾಂ ಸ್ಟೇಷನ್‌ದಲ್ಲೂ ನಡೆಯಬಾರದ ಚಟುವಟಿಕೆಗಳು ನಡೆಯುತ್ತವೆ ಎಂಬ ದೂರುಗಳಿವೆ. ಇಲ್ಲಿ ನಿಮ್ಮದೇ ಸಿಬ್ಬಂದಿಯ ವಸತಿಗೃಹಗಳಿದ್ದು ಮಹಿಳೆಯರು, ಮಕ್ಕಳು ಇರುತ್ತಾರೆ. ಅವರ ಮೇಲೆ ಕಚೇರಿ ಆವರಣದಲ್ಲಿ ನಡೆಯುವ ಅನಧಿಕೃತ ಚಟುವಟಿಕೆಗಳು ಪರಿಣಾಮ ಬೀರುತ್ತವೆ. ಇದಕ್ಕೆಲ್ಲ ಇನ್ನು ಮುಂದೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.
ರೈತರ ಪ್ರತಿನಿಧಿ ಸಾಯೇಬಣ್ಣ ವಾಲೀಕಾರ ಮಾತನಾಡಿ, ಹೆಸ್ಕಾಂ ನಿಂದ ನೇಬಗೇರಿ, ಕೋಳೂರು, ಹಡಲಗೇರಿ ಭಾಗದಲ್ಲಿ ತೋಟಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಗ್ರಾಹಕರ ಸಲಹಾ ಸಮಿತಿ ಸದಸ್ಯರು ಕಚೇರಿ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಕುರಿತು ಈಗಾಗಲೇ ಭಾಗಶಃ ಕಡಿವಾಣ ಹಾಕಿದ್ದು ಪೊಲೀಸರ ಗಮನಕ್ಕೆ ತಂದು ಕಚೇರಿಯ ಆವರಣದಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೇ ಕಚೇರಿ ಆವರಣದಲ್ಲಿ ಸಿಸಿ ಟಿವಿ ಅಳವಡಿಕೆ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಸಮೀತಿ ಸದಸ್ಯ ಸಿಕಂದರ್ ಜಾನ್ವೇಕರ, ನಾಗೇಶ ಭಜಂತ್ರಿ, ಬಸಲಿಂಗಪ್ಪಗೌಡ ಬಿರಾದಾರ, ಹೆಸ್ಕಾಂ ಸೆಕ್ಷನ್ ಅಧಿಕಾರಿಗಳಾದ ಮಲ್ಲಿಕಾರ್ಜುನ ಹೊಳಿ, ಎಂ. ಎಸ್. ತೆಗ್ಗಿನಮಠ, ಬಿ. ಎಸ್. ಯಲಗೋಡ, ಎ. ಎನ್. ಬಿರಾದಾರ, ಸಂತೋಷ ನಡಗೇರಿ, ಮೈನೂದ್ದೀನ ಜಹಾಗೀದಾರ, ಲೆಕ್ಕಾಧಿಕಾರಿ ಬಿ. ಎ. ಮಡಿವಾಳರ, ಕುಂಟೋಜಿ ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ,ಮೈಬೂಬ ದಖನಿ ಇದ್ದರು.

ಹೆಸ್ಕಾಂ ಕಚೇರಿಯ ಆವರಣ ಮಳೆ ಬಂದರೆ ಸಾಕು ತಗ್ಗುದಿನ್ನೆಗಳಿಂದ ಆವರಿಸುತ್ತದೆ. ಬಿಲ್ ಕಲೆಕ್ಟರ್‌ಗಳಿಂದ ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು. ಕುಡಿದು ಕೆಲವರು ಕಚೇರಿ ಬರುತ್ತಾರೆ. ಸಿಬ್ಬಂದಿ, ನೌಕರರ ಮೇಲೆ ಮೇಲಧಿಕಾರಿಗಳು ಸರಿಯಾದ ಬಿಗಿ ಇಟ್ಟುಕೊಳ್ಳಬೇಕು. ಹೆಸ್ಕಾಂ ಕಚೇರಿಯ ಹೊರಗಡೆ ನಾಮಫಲಕ ಹಾಕಬೇಕು.

ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯರು

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ