A member who unraveled a series of problems in the Hescom office premises

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ನೋಡಿಕೊಂಡೇ ಬಂದಿದ್ದು ಸರಿಯಾದ ಸ್ಪಂದನೆ ಸಿಗುವುದಿಲ್ಲ. ಇಲ್ಲಿ ‘ಹಲವು ರೀತಿಯ ವ್ಯವಹಾರ’ ನಡೆಯುತ್ತವೆ ಎಂದು ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯೆ ಕವಿತಾ ದಡ್ಡಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಹಕರ ಸಲಹಾ ಸಮಿತಿಗೆ ನೇಮಕಗೊಂಡ ನೂತನ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಲ್ಲಿನ ಹೆಸ್ಕಾಂ ಕಚೇರಿ ಆವರಣದಲ್ಲಿರುವ ಆಲದಮರದ ಕಟ್ಟೆ,ಈಶ್ವರ ಗುಡಿಯಲ್ಲಿ ಅನಧಿಕೃತ ವ್ಯಕ್ತಿಗಳು ಇಸ್ಪೀಟ್ ಆಡುತ್ತಾ ಕೂರುತ್ತಾರೆ. ಕಚೇರಿಗೆ ಬಿಲ್ ತುಂಬಲು ಬರುವ ಮಹಿಳೆಯರು ಮುಜುಗರದಿಂದ ಕಚೇರಿಗೆ ಬರುವ ದುಸ್ಥಿತಿ ಇದೆ. ಕಚೇರಿಯಲ್ಲಿ ಯಾವುದಕ್ಕೂ ಸರಿಯಾದ ಸ್ಪಂದನೆ ಸಿಗುವುದಿಲ್ಲ. ಗ್ರಾಹಕರಿಗೆ ಒಳ್ಳೆಯ ಸೇವೆ ಕೊಡುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.

ಹೆಸ್ಕಾಂ ಸ್ಟೇಷನ್‌ದಲ್ಲೂ ನಡೆಯಬಾರದ ಚಟುವಟಿಕೆಗಳು ನಡೆಯುತ್ತವೆ ಎಂಬ ದೂರುಗಳಿವೆ. ಇಲ್ಲಿ ನಿಮ್ಮದೇ ಸಿಬ್ಬಂದಿಯ ವಸತಿಗೃಹಗಳಿದ್ದು ಮಹಿಳೆಯರು, ಮಕ್ಕಳು ಇರುತ್ತಾರೆ. ಅವರ ಮೇಲೆ ಕಚೇರಿ ಆವರಣದಲ್ಲಿ ನಡೆಯುವ ಅನಧಿಕೃತ ಚಟುವಟಿಕೆಗಳು ಪರಿಣಾಮ ಬೀರುತ್ತವೆ. ಇದಕ್ಕೆಲ್ಲ ಇನ್ನು ಮುಂದೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.
ರೈತರ ಪ್ರತಿನಿಧಿ ಸಾಯೇಬಣ್ಣ ವಾಲೀಕಾರ ಮಾತನಾಡಿ, ಹೆಸ್ಕಾಂ ನಿಂದ ನೇಬಗೇರಿ, ಕೋಳೂರು, ಹಡಲಗೇರಿ ಭಾಗದಲ್ಲಿ ತೋಟಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಮಾತನಾಡಿ, ಗ್ರಾಹಕರ ಸಲಹಾ ಸಮಿತಿ ಸದಸ್ಯರು ಕಚೇರಿ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಕುರಿತು ಈಗಾಗಲೇ ಭಾಗಶಃ ಕಡಿವಾಣ ಹಾಕಿದ್ದು ಪೊಲೀಸರ ಗಮನಕ್ಕೆ ತಂದು ಕಚೇರಿಯ ಆವರಣದಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೇ ಕಚೇರಿ ಆವರಣದಲ್ಲಿ ಸಿಸಿ ಟಿವಿ ಅಳವಡಿಕೆ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಸಮೀತಿ ಸದಸ್ಯ ಸಿಕಂದರ್ ಜಾನ್ವೇಕರ, ನಾಗೇಶ ಭಜಂತ್ರಿ, ಬಸಲಿಂಗಪ್ಪಗೌಡ ಬಿರಾದಾರ, ಹೆಸ್ಕಾಂ ಸೆಕ್ಷನ್ ಅಧಿಕಾರಿಗಳಾದ ಮಲ್ಲಿಕಾರ್ಜುನ ಹೊಳಿ, ಎಂ. ಎಸ್. ತೆಗ್ಗಿನಮಠ, ಬಿ. ಎಸ್. ಯಲಗೋಡ, ಎ. ಎನ್. ಬಿರಾದಾರ, ಸಂತೋಷ ನಡಗೇರಿ, ಮೈನೂದ್ದೀನ ಜಹಾಗೀದಾರ, ಲೆಕ್ಕಾಧಿಕಾರಿ ಬಿ. ಎ. ಮಡಿವಾಳರ, ಕುಂಟೋಜಿ ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ,ಮೈಬೂಬ ದಖನಿ ಇದ್ದರು.

ಹೆಸ್ಕಾಂ ಕಚೇರಿಯ ಆವರಣ ಮಳೆ ಬಂದರೆ ಸಾಕು ತಗ್ಗುದಿನ್ನೆಗಳಿಂದ ಆವರಿಸುತ್ತದೆ. ಬಿಲ್ ಕಲೆಕ್ಟರ್‌ಗಳಿಂದ ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು. ಕುಡಿದು ಕೆಲವರು ಕಚೇರಿ ಬರುತ್ತಾರೆ. ಸಿಬ್ಬಂದಿ, ನೌಕರರ ಮೇಲೆ ಮೇಲಧಿಕಾರಿಗಳು ಸರಿಯಾದ ಬಿಗಿ ಇಟ್ಟುಕೊಳ್ಳಬೇಕು. ಹೆಸ್ಕಾಂ ಕಚೇರಿಯ ಹೊರಗಡೆ ನಾಮಫಲಕ ಹಾಕಬೇಕು.

ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯರು

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ