ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ ಮನವಿ ಮಾಡಿದರು.ಶಿಕ್ಷಣವೆಂಬುದು ಶಕ್ತಿ.ನಾವೆಲ್ಲ ಮಕ್ಕಳಿಗೋಸ್ಕರ ಮಾಡುವ ಆಸ್ತಿ ಶಾಶ್ವತವಲ್ಲ.ವಿದ್ಯೆ ಶಾಶ್ವತವಾಗಿ ಉಳಿಯುವ ಸಾಧನ ಎಂದರು.

ಸನ್ ೨೦೧೭-೧೮ ರಲ್ಲಿ ಶಾಲೆ ಆರಂಭವಾಗಿದೆ. ೨೦೨೨-೨೩ ರಲ್ಲಿ ಕಾಮಗಾರಿಗೆ ಆದೇಶ ನೀಡಿದ್ದು ೨೦೨೫-೨೦೨೬ ರಲ್ಲಿ ಮುಗಿದಿದೆ.ಬರಲಿರುವ ದಿನಗಳಲ್ಲಿ ೮೬೦ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಕಲಿಯಲಿದ್ದಾರೆ.ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಜೊತೆಗೆ ಮಾತನಾಡಿದ್ದು ಕನಿಷ್ಠ ೧೦ ಕೋಟಿ ರೂ.ನೀಡುವಂತೆ ಬೇಡಿಕೆ ಇರಿಸಿದ್ದೇನೆ ಎಂದರು,
ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಶ್ರದ್ಧೆ,ವಿಶ್ವಾಸದಿಂದ ನಡೆದುಕೊಳ್ಳಬೇಕು.ಗುರು ಶಿಷ್ಯರ ಸಂಬoಧ ಸೌಹಾರ್ದ ಆಗಿದ್ದರೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ. ಶಿಕ್ಷಣ ಶಿಕ್ಷೆ ಆಗಬಾರದು ಎಂದರು.

ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಅಲ್ಪಸಂಖ್ಯಾತರು,ಹಿoದುಳಿದವರು,ದಲಿತರ ಮಕ್ಕಳು ಶಿಕ್ಷಣವಂತರಾಗಬೇಕು.ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಮಾಡಿಕೊಳ್ಳಬೇಕು ಎಂದರು.

ಅಲ್ಪಸoಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ,ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಚಾರ್ಯ ಖೇಮು ರಾಠೋಡ,ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ,ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ,ಸoಗನಗೌಡ ಬಿರಾದಾರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರಾಜು ಕಲ್ಬುರ್ಗಿ,ವಕೀಲರಾದ ಎಂ.ಎ.ಮುದ್ದೇಬಿಹಾಳ,ಎನ್.ಆರ್.ಗುರಿಕಾರ,ಎo.ಎo.ಬೆಳಗಲ್,ಟ್ರಿನಿಜ್ ಗ್ರೂಪ್‌ನ ಪ್ರವೀಣ ನಾಯಕ, ರವಿ ನಾಯಕ,ಈರಣಗೌಡ ಪಾಟೀಲ,ವೆಂಕಟೇಶ ನಾಯಕ,ಗೋಪಿ ಮಡಿವಾಳರ ಮೊದಲಾದವರು ಇದ್ದರು.

Latest News

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಸರ್ಕಾರಿ ಶಾಲೆ ಉಳಿವಿಗಾಗಿ 3 ದಿವಸ ಉಪವಾಸ ಸತ್ಯಾಗ್ರಹ

ಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ

ಮುದ್ದೇಬಿಹಾಳ : ತೆರಿಗೆ ವಸೂಲಾತಿಯಲ್ಲಿ ಶೇ.100% ಪ್ರಗತಿ: ಗ್ರಾ.ಪಂ ನೌಕರರಿಗೆ ಸನ್ಮಾನ

ಮುದ್ದೇಬಿಹಾಳ : ತೆರಿಗೆ ವಸೂಲಾತಿಯಲ್ಲಿ ಶೇ.100% ಪ್ರಗತಿ: ಗ್ರಾ.ಪಂ ನೌಕರರಿಗೆ ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಗ್ರಾಪಂನ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಗುರಿಗೆ ಮೀರಿ ವಸೂಲಾತಿಯಲ್ಲಿ ಶೇ.100%

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಜಲಾನಯನ ಇಲಾಖೆ,ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಡಿ.13 ರಂದು ಮದ್ಯಾಹ್ನ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ

ಡಿ.21 ರಿಂದ 24 ರವರೆಗೆ ಅಭಿಯಾನ:                           MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾಗರಿಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಲಸಿಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಡಿ.21ರಂದು ಬೂತ್ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು ನಂತರ ಮೂರು ದಿನ ಮನೆ ಮನೆಗೆ ತೆರಳಿ ಪೋಲಿಯೋ

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

ವಿಶಾಖಪಟ್ಟಣ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat kohli) ಅವರು ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಿರುವ ಸಂಗತಿ. ಹಾಗೇ ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿಲ್ಲ. IND vs SA Match ಹೌದು, ಪ್ರಸ್ತುತ ವಿಶಾಖಪಟ್ಟಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ