ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ ಮನವಿ ಮಾಡಿದರು.ಶಿಕ್ಷಣವೆಂಬುದು ಶಕ್ತಿ.ನಾವೆಲ್ಲ ಮಕ್ಕಳಿಗೋಸ್ಕರ ಮಾಡುವ ಆಸ್ತಿ ಶಾಶ್ವತವಲ್ಲ.ವಿದ್ಯೆ ಶಾಶ್ವತವಾಗಿ ಉಳಿಯುವ ಸಾಧನ ಎಂದರು.

ಸನ್ ೨೦೧೭-೧೮ ರಲ್ಲಿ ಶಾಲೆ ಆರಂಭವಾಗಿದೆ. ೨೦೨೨-೨೩ ರಲ್ಲಿ ಕಾಮಗಾರಿಗೆ ಆದೇಶ ನೀಡಿದ್ದು ೨೦೨೫-೨೦೨೬ ರಲ್ಲಿ ಮುಗಿದಿದೆ.ಬರಲಿರುವ ದಿನಗಳಲ್ಲಿ ೮೬೦ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಕಲಿಯಲಿದ್ದಾರೆ.ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಜೊತೆಗೆ ಮಾತನಾಡಿದ್ದು ಕನಿಷ್ಠ ೧೦ ಕೋಟಿ ರೂ.ನೀಡುವಂತೆ ಬೇಡಿಕೆ ಇರಿಸಿದ್ದೇನೆ ಎಂದರು,
ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಶ್ರದ್ಧೆ,ವಿಶ್ವಾಸದಿಂದ ನಡೆದುಕೊಳ್ಳಬೇಕು.ಗುರು ಶಿಷ್ಯರ ಸಂಬoಧ ಸೌಹಾರ್ದ ಆಗಿದ್ದರೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ. ಶಿಕ್ಷಣ ಶಿಕ್ಷೆ ಆಗಬಾರದು ಎಂದರು.

ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಅಲ್ಪಸಂಖ್ಯಾತರು,ಹಿoದುಳಿದವರು,ದಲಿತರ ಮಕ್ಕಳು ಶಿಕ್ಷಣವಂತರಾಗಬೇಕು.ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಮಾಡಿಕೊಳ್ಳಬೇಕು ಎಂದರು.

ಅಲ್ಪಸoಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ,ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಚಾರ್ಯ ಖೇಮು ರಾಠೋಡ,ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ,ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ,ಸoಗನಗೌಡ ಬಿರಾದಾರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರಾಜು ಕಲ್ಬುರ್ಗಿ,ವಕೀಲರಾದ ಎಂ.ಎ.ಮುದ್ದೇಬಿಹಾಳ,ಎನ್.ಆರ್.ಗುರಿಕಾರ,ಎo.ಎo.ಬೆಳಗಲ್,ಟ್ರಿನಿಜ್ ಗ್ರೂಪ್‌ನ ಪ್ರವೀಣ ನಾಯಕ, ರವಿ ನಾಯಕ,ಈರಣಗೌಡ ಪಾಟೀಲ,ವೆಂಕಟೇಶ ನಾಯಕ,ಗೋಪಿ ಮಡಿವಾಳರ ಮೊದಲಾದವರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ