ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ ಮನವಿ ಮಾಡಿದರು.ಶಿಕ್ಷಣವೆಂಬುದು ಶಕ್ತಿ.ನಾವೆಲ್ಲ ಮಕ್ಕಳಿಗೋಸ್ಕರ ಮಾಡುವ ಆಸ್ತಿ ಶಾಶ್ವತವಲ್ಲ.ವಿದ್ಯೆ ಶಾಶ್ವತವಾಗಿ ಉಳಿಯುವ ಸಾಧನ ಎಂದರು.

ಸನ್ ೨೦೧೭-೧೮ ರಲ್ಲಿ ಶಾಲೆ ಆರಂಭವಾಗಿದೆ. ೨೦೨೨-೨೩ ರಲ್ಲಿ ಕಾಮಗಾರಿಗೆ ಆದೇಶ ನೀಡಿದ್ದು ೨೦೨೫-೨೦೨೬ ರಲ್ಲಿ ಮುಗಿದಿದೆ.ಬರಲಿರುವ ದಿನಗಳಲ್ಲಿ ೮೬೦ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಕಲಿಯಲಿದ್ದಾರೆ.ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಜೊತೆಗೆ ಮಾತನಾಡಿದ್ದು ಕನಿಷ್ಠ ೧೦ ಕೋಟಿ ರೂ.ನೀಡುವಂತೆ ಬೇಡಿಕೆ ಇರಿಸಿದ್ದೇನೆ ಎಂದರು,
ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಶ್ರದ್ಧೆ,ವಿಶ್ವಾಸದಿಂದ ನಡೆದುಕೊಳ್ಳಬೇಕು.ಗುರು ಶಿಷ್ಯರ ಸಂಬoಧ ಸೌಹಾರ್ದ ಆಗಿದ್ದರೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ. ಶಿಕ್ಷಣ ಶಿಕ್ಷೆ ಆಗಬಾರದು ಎಂದರು.

ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಅಲ್ಪಸಂಖ್ಯಾತರು,ಹಿoದುಳಿದವರು,ದಲಿತರ ಮಕ್ಕಳು ಶಿಕ್ಷಣವಂತರಾಗಬೇಕು.ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಮಾಡಿಕೊಳ್ಳಬೇಕು ಎಂದರು.

ಅಲ್ಪಸoಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ,ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಚಾರ್ಯ ಖೇಮು ರಾಠೋಡ,ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ,ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ,ಸoಗನಗೌಡ ಬಿರಾದಾರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರಾಜು ಕಲ್ಬುರ್ಗಿ,ವಕೀಲರಾದ ಎಂ.ಎ.ಮುದ್ದೇಬಿಹಾಳ,ಎನ್.ಆರ್.ಗುರಿಕಾರ,ಎo.ಎo.ಬೆಳಗಲ್,ಟ್ರಿನಿಜ್ ಗ್ರೂಪ್‌ನ ಪ್ರವೀಣ ನಾಯಕ, ರವಿ ನಾಯಕ,ಈರಣಗೌಡ ಪಾಟೀಲ,ವೆಂಕಟೇಶ ನಾಯಕ,ಗೋಪಿ ಮಡಿವಾಳರ ಮೊದಲಾದವರು ಇದ್ದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ