ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ ಮನವಿ ಮಾಡಿದರು.ಶಿಕ್ಷಣವೆಂಬುದು ಶಕ್ತಿ.ನಾವೆಲ್ಲ ಮಕ್ಕಳಿಗೋಸ್ಕರ ಮಾಡುವ ಆಸ್ತಿ ಶಾಶ್ವತವಲ್ಲ.ವಿದ್ಯೆ ಶಾಶ್ವತವಾಗಿ ಉಳಿಯುವ ಸಾಧನ ಎಂದರು.

ಸನ್ ೨೦೧೭-೧೮ ರಲ್ಲಿ ಶಾಲೆ ಆರಂಭವಾಗಿದೆ. ೨೦೨೨-೨೩ ರಲ್ಲಿ ಕಾಮಗಾರಿಗೆ ಆದೇಶ ನೀಡಿದ್ದು ೨೦೨೫-೨೦೨೬ ರಲ್ಲಿ ಮುಗಿದಿದೆ.ಬರಲಿರುವ ದಿನಗಳಲ್ಲಿ ೮೬೦ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಕಲಿಯಲಿದ್ದಾರೆ.ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಜೊತೆಗೆ ಮಾತನಾಡಿದ್ದು ಕನಿಷ್ಠ ೧೦ ಕೋಟಿ ರೂ.ನೀಡುವಂತೆ ಬೇಡಿಕೆ ಇರಿಸಿದ್ದೇನೆ ಎಂದರು,
ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಶ್ರದ್ಧೆ,ವಿಶ್ವಾಸದಿಂದ ನಡೆದುಕೊಳ್ಳಬೇಕು.ಗುರು ಶಿಷ್ಯರ ಸಂಬoಧ ಸೌಹಾರ್ದ ಆಗಿದ್ದರೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ. ಶಿಕ್ಷಣ ಶಿಕ್ಷೆ ಆಗಬಾರದು ಎಂದರು.

ಕಾAಗ್ರೆಸ್ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಅಲ್ಪಸಂಖ್ಯಾತರು,ಹಿoದುಳಿದವರು,ದಲಿತರ ಮಕ್ಕಳು ಶಿಕ್ಷಣವಂತರಾಗಬೇಕು.ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಮಾಡಿಕೊಳ್ಳಬೇಕು ಎಂದರು.

ಅಲ್ಪಸoಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ,ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಚಾರ್ಯ ಖೇಮು ರಾಠೋಡ,ನಿವೃತ್ತ ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರ,ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ,ಸoಗನಗೌಡ ಬಿರಾದಾರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರಾಜು ಕಲ್ಬುರ್ಗಿ,ವಕೀಲರಾದ ಎಂ.ಎ.ಮುದ್ದೇಬಿಹಾಳ,ಎನ್.ಆರ್.ಗುರಿಕಾರ,ಎo.ಎo.ಬೆಳಗಲ್,ಟ್ರಿನಿಜ್ ಗ್ರೂಪ್‌ನ ಪ್ರವೀಣ ನಾಯಕ, ರವಿ ನಾಯಕ,ಈರಣಗೌಡ ಪಾಟೀಲ,ವೆಂಕಟೇಶ ನಾಯಕ,ಗೋಪಿ ಮಡಿವಾಳರ ಮೊದಲಾದವರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ