A pub bouncer ran amok after a bike was hit by a car. The video tweeted by the police went viral

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೆಂಗಳೂರು: ರಸ್ತೆಯಲ್ಲಿ ದಿಢೀರನೇ ಬ್ರೇಕ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷಿಸಿದರು ಎಂದು ಸಿಟ್ಟಿಗೆದ್ದು ಸಾಫ್ಟ್‌ವೇರ್ ಉದ್ಯೋಗಿ ದಂಪತಿ ಕಾರನ್ನು ಅಡ್ಡಗಟ್ಟಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಪಬ್ ಬೌನ್ಸರ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬೆಳ್ಳಂದೂರು ನಿವಾಸಿ ನವೀನ್ ರೆಡ್ಡಿ ಬಂಧಿತನಾಗಿದ್ದು, ಸರ್ಜಾಪುರ ರಸ್ತೆಯ ಮೇಲ್ವೇತುವೆ ಬಳಿ ಸೋಮವಾರ ರಾತ್ರಿ ರೆಡ್ಡಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಈ ಗಲಾಟೆ ನಡೆದಿದೆ.

Join Our Telegram: https://t.me/dcgkannada

ತಮ್ಮ ಕಾರಿನ ಮೇಲೆ ರೆಡ್ಡಿ ಹಲ್ಲೆ ನಡೆಸಿದ್ದ ವಿಡಿಯೋ ವನ್ನು ಟ್ವಿಟರ್ ನಲ್ಲಿ ಶೇರ್‌ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಸಾಫ್ಟ್‌ವೇ‌ರ್ ಉದ್ಯೋಗಿ ಜಿತಿನ್ ದೂರು ನೀಡಿದ್ದರು. ಈ ಗಲಾಟೆ ವಿಡಿಯೋ ವೈರಲ್ ಆಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ:

ಸರ್ಜಾಪುರ ಮೇಲ್ಲೇತುವೆ ಇಳಿಯುವಾಗ ದಿಢೀರನೇ ತಮ್ಮ ಕಾರಿಗೆ ಜಿತಿನ್‌ ರಾಜ್ ಬ್ರೇಕ್ ಹಾಕಿದ್ದಾರೆ. ಆ ವೇಳೆ ಕಾರಿನ ಹಿಂದೆ ಬರುತ್ತಿದ್ದ ಕಂಗಾಲಾಗಿ ನವೀನ್ ರೆಡ್ಡಿ, ಟೆಕ್ಕಿ ಕಾರಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದಿದ್ದಾನೆ. ಆದರೆ ಕೆಳಗೆ ಬಿದ್ದರು ವಿಚಾರಿಸದೆ ಜಿತಿನ್ ಮುಂದು ವರೆದಿದ್ದಾರೆ.

ಈ ವೇಳೆ ಬೈಕ್ ಅನ್ನು ಓಡಿಸಿಕೊಂಡು ಕಾರಿನ ಮುಂದೆ ಬಂದ ನವೀನ್, ಕಾರು ನಿಲ್ಲಿಸುವಂತೆ ಸೂಚಿಸಿದ್ದಾನೆ. ಆದರೆ ಈ ಮಾತಿಗೆ ಕ್ಯಾರೇ ಎನ್ನದೆ ಕಾರು ಚಾಲಾಯಿ ಸಲು ಜಿತಿನ್ ಮುಂದಾಗಿದ್ದಾರೆ. ಈ ನಿರ್ಲಕ್ಷ್ಯತನ ವರ್ತನೆಯಿಂದ ಕೆರಳಿದ ನವೀನ್, ತಕ್ಷಣವೇ ಕಾರಿನ ವೈಫ‌ರ್ ಕಿತ್ತು ಹಾಕಿ ಗಲಾಟೆ ಮಾಡಿದ್ದಾನೆ.

ಈ ದುಂಡಾವರ್ತನೆಗೆ ಭಯ ಗೊಂಡ ಜಿತಿನ್ ರಾಜ್ ದಂಪತಿ, ಕಾರಿನಲ್ಲಿ ಮಗುವಿದೆ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಕೊನೆಗೆ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ವಿಡಿಯೋವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡು ನಗರ ಪೊಲೀಸ್ ಆಯುಕ್ತರಿಗೆ ಜಿತಿನ್ ದೂರು ಕೊಟ್ಟಿದ್ದರು. ಆರೋಪಿ ಕೋರಮಂಗಲದ ಪಬ್‌ನಲ್ಲಿ ಬೌನ್ಸರ್‌ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ