A pub bouncer ran amok after a bike was hit by a car. The video tweeted by the police went viral

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

ಬೆಂಗಳೂರು: ರಸ್ತೆಯಲ್ಲಿ ದಿಢೀರನೇ ಬ್ರೇಕ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷಿಸಿದರು ಎಂದು ಸಿಟ್ಟಿಗೆದ್ದು ಸಾಫ್ಟ್‌ವೇರ್ ಉದ್ಯೋಗಿ ದಂಪತಿ ಕಾರನ್ನು ಅಡ್ಡಗಟ್ಟಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಪಬ್ ಬೌನ್ಸರ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬೆಳ್ಳಂದೂರು ನಿವಾಸಿ ನವೀನ್ ರೆಡ್ಡಿ ಬಂಧಿತನಾಗಿದ್ದು, ಸರ್ಜಾಪುರ ರಸ್ತೆಯ ಮೇಲ್ವೇತುವೆ ಬಳಿ ಸೋಮವಾರ ರಾತ್ರಿ ರೆಡ್ಡಿ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಈ ಗಲಾಟೆ ನಡೆದಿದೆ.

Join Our Telegram: https://t.me/dcgkannada

ತಮ್ಮ ಕಾರಿನ ಮೇಲೆ ರೆಡ್ಡಿ ಹಲ್ಲೆ ನಡೆಸಿದ್ದ ವಿಡಿಯೋ ವನ್ನು ಟ್ವಿಟರ್ ನಲ್ಲಿ ಶೇರ್‌ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಸಾಫ್ಟ್‌ವೇ‌ರ್ ಉದ್ಯೋಗಿ ಜಿತಿನ್ ದೂರು ನೀಡಿದ್ದರು. ಈ ಗಲಾಟೆ ವಿಡಿಯೋ ವೈರಲ್ ಆಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ:

ಸರ್ಜಾಪುರ ಮೇಲ್ಲೇತುವೆ ಇಳಿಯುವಾಗ ದಿಢೀರನೇ ತಮ್ಮ ಕಾರಿಗೆ ಜಿತಿನ್‌ ರಾಜ್ ಬ್ರೇಕ್ ಹಾಕಿದ್ದಾರೆ. ಆ ವೇಳೆ ಕಾರಿನ ಹಿಂದೆ ಬರುತ್ತಿದ್ದ ಕಂಗಾಲಾಗಿ ನವೀನ್ ರೆಡ್ಡಿ, ಟೆಕ್ಕಿ ಕಾರಿಗೆ ಬೈಕ್ ಗುದ್ದಿಸಿ ಕೆಳಗೆ ಬಿದ್ದಿದ್ದಾನೆ. ಆದರೆ ಕೆಳಗೆ ಬಿದ್ದರು ವಿಚಾರಿಸದೆ ಜಿತಿನ್ ಮುಂದು ವರೆದಿದ್ದಾರೆ.

ಈ ವೇಳೆ ಬೈಕ್ ಅನ್ನು ಓಡಿಸಿಕೊಂಡು ಕಾರಿನ ಮುಂದೆ ಬಂದ ನವೀನ್, ಕಾರು ನಿಲ್ಲಿಸುವಂತೆ ಸೂಚಿಸಿದ್ದಾನೆ. ಆದರೆ ಈ ಮಾತಿಗೆ ಕ್ಯಾರೇ ಎನ್ನದೆ ಕಾರು ಚಾಲಾಯಿ ಸಲು ಜಿತಿನ್ ಮುಂದಾಗಿದ್ದಾರೆ. ಈ ನಿರ್ಲಕ್ಷ್ಯತನ ವರ್ತನೆಯಿಂದ ಕೆರಳಿದ ನವೀನ್, ತಕ್ಷಣವೇ ಕಾರಿನ ವೈಫ‌ರ್ ಕಿತ್ತು ಹಾಕಿ ಗಲಾಟೆ ಮಾಡಿದ್ದಾನೆ.

ಈ ದುಂಡಾವರ್ತನೆಗೆ ಭಯ ಗೊಂಡ ಜಿತಿನ್ ರಾಜ್ ದಂಪತಿ, ಕಾರಿನಲ್ಲಿ ಮಗುವಿದೆ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಕೊನೆಗೆ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ವಿಡಿಯೋವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡು ನಗರ ಪೊಲೀಸ್ ಆಯುಕ್ತರಿಗೆ ಜಿತಿನ್ ದೂರು ಕೊಟ್ಟಿದ್ದರು. ಆರೋಪಿ ಕೋರಮಂಗಲದ ಪಬ್‌ನಲ್ಲಿ ಬೌನ್ಸರ್‌ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ