ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು.

ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಬೆಳಗ್ಗೆ ಲೋಡ್ ಬಂದಿದ್ದರಿAದ ಹೆಚ್ಚಿನ ಜನಸಂದಣಿ ಕಂಡು ಬಂದಿತು.ವಿಜಯಪುರ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲಿಯಂ ಬಂಕ್ ಮುಂದೆಯೂ ಸಾಕಷ್ಟು ಜನ ಜಮಾಯಿಸಿದ್ದರು.ಡಿಸೇಲ್ ಲಭ್ಯ ಇರುವವರೆಗೂ ಗ್ರಾಹಕರಿಗೆ ಮಾರಾಟ ಮಾಡಿದ ಬಂಕ್‌ನವರು ಮತ್ತಷ್ಟು ಡಿಸೇಲ್,ಪೆಟ್ರೋಲ್‌ಗಾಗಿ ಬೇಡಿಕೆ ಸಲ್ಲಿಸಿದ್ದಾರೆ.ಕೆಲವು ಬಂಕ್‌ಗಳಲ್ಲಿ ಸರದಿಯಲ್ಲಿ ನಿಲ್ಲದ ಯುವಕರು ಡಿಸೇಲ್ ಪಡೆದುಕೊಳ್ಳಲು ಮುಂದಾದಾಗ ಸರದಿಯಲ್ಲಿದ್ದವರು ತೀವ್ರ ವಾಗ್ವಾದ ನಡೆಸಿ ಹಿಂದಕ್ಕೆ ಕಳಿಸಿದ ಘಟನೆಗಳು ನಡೆದಿವೆ.

ಆಹಾರ,ನಾಗರಿಕರ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಸದ್ಯಕ್ಕೆ ಜಿಲ್ಲೆಯಲ್ಲಿ ಡಿಸೇಲ್,ಪೆಟ್ರೋಲ್‌ಗೆ ಕೊರತೆ ಇಲ್ಲವೆಂದು ಮಾರಾಟಾಧಿಕಾರಿಗಳು ಹೇಳುತ್ತಿದ್ದಾರೆ.ಆದರೆ ಬಂಕ್‌ನವರು ಬೇಡಿಕೆಯನ್ನು ಮುಂಗಡಪಾವತಿಯೊAದಿಗೆ ಬುಕ್ ಮಾಡಿದರೆ ಮಾತ್ರ ಇಂಧನ ಪೂರೈಕೆ ಮಾಡಲು ಕಂಪನಿಗಳು ಮುಂದಾಗುತ್ತಿವೆ.ಹೀಗಾಗಿ ಕೆಲವು ಬಂಕ್‌ನವರು ಖಾಲಿ ಆಗಿದೆ ಎಂಬ ನಾಮಫಲಕ ಹಾಕುತ್ತಿದ್ದಾರೆ.ಆದಾಗ್ಯೂ ಯಾವ ಬಂಕನವರು ಮುಂಗಡವಾಗಿ ಹಣ ಪಾವತಿಸಿ ಇಂಧನಕ್ಕಾಗಿ ಬೇಡಿಕೆ ಸಲ್ಲಿಸುತ್ತಾರೆಯೋ ಅವರಿಗೆ ಆದಷ್ಟು ತ್ವರಿತವಾಗಿ ಇಂಧನ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಕಂಪನಿಯ ಮಾರಾಟಾಧಿಕಾರಿಗಳಿಗೆ ತಿಳಿಸಿದ್ದೇವೆ.ಈ ಸಂಬAಧ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಆರಂಭಿಸಿದ್ದೇವೆ ಎಂದು ಹೇಳಿದರು.

ಗುರಡ್ಡಿ ಪೆಟ್ರೋಲಿಯಂ ಮಾಲೀಕ ಜಿ.ಜಿ.ಗುರಡ್ಡಿ ಮಾತನಾಡಿ, ಮುದ್ದೇಬಿಹಾಳ ಪಟ್ಟಣದ ವ್ಯಾಪ್ತಿಯಲ್ಲಿ 11 ಬಂಕ್‌ಗಳಿವೆ.ಅದರಲ್ಲಿ ನನಗೆ ತಿಳಿದ ಮಟ್ಟಿಗೆ ಮೂರು ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಲಭ್ಯವಿತ್ತು.ನಮ್ಮಲ್ಲಿ ಇಂದು ಒಂದೆ ದಿನ 5200 ಲೀಟರ್ ಮಾರಾಟ ಮಾಡಿದ್ದೇವೆ.ನಮಗೆ ಬೇಕಾದಷ್ಟು ಇಂಧನ ಅಧಿಕಾರಿಗಳು ಪೂರೈಸುತ್ತಿದ್ದಾರೆ.ಯುದ್ಧದ ಸನ್ನಿವೇಶದ ಸಮಯದಲ್ಲಿ ಯಾರೂ ಈ ವಿಷಯದಲ್ಲಿ ಏನೂ ಮಾಡಲು ಅಸಾಧ್ಯ ಎನ್ನುವಂತಾಗಿದೆ.ಎಲ್ಲರಿಗೂ ಡಿಸೇಲ್ ದೊರೆಯಬೇಕು ಎಂಬ ಉದ್ದೇಶದಿಂದ ಒಬ್ಬರಿಗೆ 2000 ರೂ.ಗಳಷ್ಟು ಸಿಮೀತವಾಗಿ ಇಂಧನ ನೀಡುತ್ತಿದ್ದೇವೆ ಎಂದು ಹೇಳಿದರು.

ಐಒಸಿಎಲ್ ಮಾರಾಟಾಧಿಕಾರಿ ಶರಣಬಸವ ಕಳಸದ ಮಾತನಾಡಿ, ವಿಜಯಪುರ ಜಿಲ್ಲೆಯ ಐಓಸಿಎಲ್ ಪ್ಲಾಂಟ್‌ನಿAದ ನಿತ್ಯವೂ 150-160 ಟ್ಯಾಂಕ್ ಬೆಳಗಾವಿ,ವಿಜಯಪುರ,ಬಾಗಲಕೋಟ ಜಿಲ್ಲೆಯ ಬಂಕ್‌ಗಳಿಗೆ ಕಳಿಸುವ ಕೆಲಸ ಮಾಡುತ್ತಿದ್ದೇವೆ.ಯುದ್ಧದ ಸನ್ನಿವೇಶದ ಕಾರಣವೊಡ್ಡಿ ಕೆಲವು ಕಂಪನಿಯವರು ಇಂಧನ ಮಾರಾಟವನ್ನು ಕೈ ಬಿಟ್ಟಿದ್ದಾರೆ.ಇದರಿಂದ ನಮ್ಮ ಕಂಪನಿಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ.ಅಧಿಕಾರಿಗಳಿಗೆ ನಾವು ಮನವಿ ಮಾಡಿದ್ದು ಇನ್ನುಳಿದ ಬಂಕ್‌ನವರು ಡಿಸೇಲ್,ಪೆಟ್ರೋಲ್ ಮಾರಾಟಕ್ಕೆ ಮುಂದಾಗಬೇಕು.ಬAಕ್‌ಗಳನ್ನು ಬಂದ್ ಮಾಡಿಕೊಂಡು ಕೂಡದಂತೆ ಆಯಾ ಮಾಲೀಕರಿಗೆ ತಿಳಿಸಬೇಕು ಎಂದು ಕೋರಿದ್ದೇವೆ.ಎಲ್ಲರಿಗೂ ಸಮಾನವಾಗಿ ಡಿಸೇಲ್ ,ಪೆಟ್ರೋಲ್ ದೊರೆಯಬೇಕು ಎಂಬುದು ನಮ್ಮ ಉದ್ದೇಶ.ಒಬ್ಬರಿಗೆ ಒಂದೆ ತಾಲ್ಲೂಕಿಗೆ ಕೇಳಿದಷ್ಟು ಇಂಧನ ಈ ಸಮಯದಲ್ಲಿ ಪೂರೈಕೆ ಮಾಡುವುದು ಅಸಾಧ್ಯದ ಸಂಗತಿ ಎಂದು ಹೇಳಿದರು.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.