ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು.

ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಬೆಳಗ್ಗೆ ಲೋಡ್ ಬಂದಿದ್ದರಿAದ ಹೆಚ್ಚಿನ ಜನಸಂದಣಿ ಕಂಡು ಬಂದಿತು.ವಿಜಯಪುರ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲಿಯಂ ಬಂಕ್ ಮುಂದೆಯೂ ಸಾಕಷ್ಟು ಜನ ಜಮಾಯಿಸಿದ್ದರು.ಡಿಸೇಲ್ ಲಭ್ಯ ಇರುವವರೆಗೂ ಗ್ರಾಹಕರಿಗೆ ಮಾರಾಟ ಮಾಡಿದ ಬಂಕ್‌ನವರು ಮತ್ತಷ್ಟು ಡಿಸೇಲ್,ಪೆಟ್ರೋಲ್‌ಗಾಗಿ ಬೇಡಿಕೆ ಸಲ್ಲಿಸಿದ್ದಾರೆ.ಕೆಲವು ಬಂಕ್‌ಗಳಲ್ಲಿ ಸರದಿಯಲ್ಲಿ ನಿಲ್ಲದ ಯುವಕರು ಡಿಸೇಲ್ ಪಡೆದುಕೊಳ್ಳಲು ಮುಂದಾದಾಗ ಸರದಿಯಲ್ಲಿದ್ದವರು ತೀವ್ರ ವಾಗ್ವಾದ ನಡೆಸಿ ಹಿಂದಕ್ಕೆ ಕಳಿಸಿದ ಘಟನೆಗಳು ನಡೆದಿವೆ.

ಆಹಾರ,ನಾಗರಿಕರ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಸದ್ಯಕ್ಕೆ ಜಿಲ್ಲೆಯಲ್ಲಿ ಡಿಸೇಲ್,ಪೆಟ್ರೋಲ್‌ಗೆ ಕೊರತೆ ಇಲ್ಲವೆಂದು ಮಾರಾಟಾಧಿಕಾರಿಗಳು ಹೇಳುತ್ತಿದ್ದಾರೆ.ಆದರೆ ಬಂಕ್‌ನವರು ಬೇಡಿಕೆಯನ್ನು ಮುಂಗಡಪಾವತಿಯೊAದಿಗೆ ಬುಕ್ ಮಾಡಿದರೆ ಮಾತ್ರ ಇಂಧನ ಪೂರೈಕೆ ಮಾಡಲು ಕಂಪನಿಗಳು ಮುಂದಾಗುತ್ತಿವೆ.ಹೀಗಾಗಿ ಕೆಲವು ಬಂಕ್‌ನವರು ಖಾಲಿ ಆಗಿದೆ ಎಂಬ ನಾಮಫಲಕ ಹಾಕುತ್ತಿದ್ದಾರೆ.ಆದಾಗ್ಯೂ ಯಾವ ಬಂಕನವರು ಮುಂಗಡವಾಗಿ ಹಣ ಪಾವತಿಸಿ ಇಂಧನಕ್ಕಾಗಿ ಬೇಡಿಕೆ ಸಲ್ಲಿಸುತ್ತಾರೆಯೋ ಅವರಿಗೆ ಆದಷ್ಟು ತ್ವರಿತವಾಗಿ ಇಂಧನ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಕಂಪನಿಯ ಮಾರಾಟಾಧಿಕಾರಿಗಳಿಗೆ ತಿಳಿಸಿದ್ದೇವೆ.ಈ ಸಂಬAಧ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಆರಂಭಿಸಿದ್ದೇವೆ ಎಂದು ಹೇಳಿದರು.

ಗುರಡ್ಡಿ ಪೆಟ್ರೋಲಿಯಂ ಮಾಲೀಕ ಜಿ.ಜಿ.ಗುರಡ್ಡಿ ಮಾತನಾಡಿ, ಮುದ್ದೇಬಿಹಾಳ ಪಟ್ಟಣದ ವ್ಯಾಪ್ತಿಯಲ್ಲಿ 11 ಬಂಕ್‌ಗಳಿವೆ.ಅದರಲ್ಲಿ ನನಗೆ ತಿಳಿದ ಮಟ್ಟಿಗೆ ಮೂರು ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಲಭ್ಯವಿತ್ತು.ನಮ್ಮಲ್ಲಿ ಇಂದು ಒಂದೆ ದಿನ 5200 ಲೀಟರ್ ಮಾರಾಟ ಮಾಡಿದ್ದೇವೆ.ನಮಗೆ ಬೇಕಾದಷ್ಟು ಇಂಧನ ಅಧಿಕಾರಿಗಳು ಪೂರೈಸುತ್ತಿದ್ದಾರೆ.ಯುದ್ಧದ ಸನ್ನಿವೇಶದ ಸಮಯದಲ್ಲಿ ಯಾರೂ ಈ ವಿಷಯದಲ್ಲಿ ಏನೂ ಮಾಡಲು ಅಸಾಧ್ಯ ಎನ್ನುವಂತಾಗಿದೆ.ಎಲ್ಲರಿಗೂ ಡಿಸೇಲ್ ದೊರೆಯಬೇಕು ಎಂಬ ಉದ್ದೇಶದಿಂದ ಒಬ್ಬರಿಗೆ 2000 ರೂ.ಗಳಷ್ಟು ಸಿಮೀತವಾಗಿ ಇಂಧನ ನೀಡುತ್ತಿದ್ದೇವೆ ಎಂದು ಹೇಳಿದರು.

ಐಒಸಿಎಲ್ ಮಾರಾಟಾಧಿಕಾರಿ ಶರಣಬಸವ ಕಳಸದ ಮಾತನಾಡಿ, ವಿಜಯಪುರ ಜಿಲ್ಲೆಯ ಐಓಸಿಎಲ್ ಪ್ಲಾಂಟ್‌ನಿAದ ನಿತ್ಯವೂ 150-160 ಟ್ಯಾಂಕ್ ಬೆಳಗಾವಿ,ವಿಜಯಪುರ,ಬಾಗಲಕೋಟ ಜಿಲ್ಲೆಯ ಬಂಕ್‌ಗಳಿಗೆ ಕಳಿಸುವ ಕೆಲಸ ಮಾಡುತ್ತಿದ್ದೇವೆ.ಯುದ್ಧದ ಸನ್ನಿವೇಶದ ಕಾರಣವೊಡ್ಡಿ ಕೆಲವು ಕಂಪನಿಯವರು ಇಂಧನ ಮಾರಾಟವನ್ನು ಕೈ ಬಿಟ್ಟಿದ್ದಾರೆ.ಇದರಿಂದ ನಮ್ಮ ಕಂಪನಿಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ.ಅಧಿಕಾರಿಗಳಿಗೆ ನಾವು ಮನವಿ ಮಾಡಿದ್ದು ಇನ್ನುಳಿದ ಬಂಕ್‌ನವರು ಡಿಸೇಲ್,ಪೆಟ್ರೋಲ್ ಮಾರಾಟಕ್ಕೆ ಮುಂದಾಗಬೇಕು.ಬAಕ್‌ಗಳನ್ನು ಬಂದ್ ಮಾಡಿಕೊಂಡು ಕೂಡದಂತೆ ಆಯಾ ಮಾಲೀಕರಿಗೆ ತಿಳಿಸಬೇಕು ಎಂದು ಕೋರಿದ್ದೇವೆ.ಎಲ್ಲರಿಗೂ ಸಮಾನವಾಗಿ ಡಿಸೇಲ್ ,ಪೆಟ್ರೋಲ್ ದೊರೆಯಬೇಕು ಎಂಬುದು ನಮ್ಮ ಉದ್ದೇಶ.ಒಬ್ಬರಿಗೆ ಒಂದೆ ತಾಲ್ಲೂಕಿಗೆ ಕೇಳಿದಷ್ಟು ಇಂಧನ ಈ ಸಮಯದಲ್ಲಿ ಪೂರೈಕೆ ಮಾಡುವುದು ಅಸಾಧ್ಯದ ಸಂಗತಿ ಎಂದು ಹೇಳಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ