A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು