A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ