A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ