A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ