ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ