ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ