ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ