ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ