ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ.

ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ ತಂದೆಯನ್ನು ಕಳೆದುಕೊಂಡಿದ್ದು ಮುಂದಿನ ಶಿಕ್ಷಣವನ್ನು ಓದಲು ಬಡತನ ಅಡ್ಡಿಯಾಗಿತ್ತು. ಆತನಿಗೆ ಈ ಪರೀಕ್ಷೆಯಲ್ಲಿ 21ನೇ ಸ್ಥಾನ ಬಂದಿತ್ತು.ಇದನ್ನು ಗಮನಿಸಿದ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಹಾಗೂ ಮಾರ್ಗದರ್ಶಕರಾದ ನಾಗರಾಜಗೌಡ ಬಿರಾಜದಾರ ಅವರು, ವಿದ್ಯಾರ್ಥಿ ಕಾರ್ತಿಕನ ತಾಯಿ ಹೊರಗುತ್ತಿಗೆಯಲ್ಲಿ ಅಲ್ಪವೇತನದಲ್ಲಿ ಕೆಲಸ ಮಾಡುತ್ತಿದ್ದು ಆತನಿಗೆ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ತೀರ್ಮಾನ ಪ್ರಕಟಿಸಿದರಲ್ಲದೇ ಕಾರ್ತಿಕ್‌ನ ಎರಡು ವರ್ಷದ ಶಿಕ್ಷಣ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದ್ದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮಾದರಿಯಾಯಿತು.

ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನಂದ ಭಾಷ್ಪ : ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ಮೊದಲ 20 ಸ್ಥಾನಗಳಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳು ಖುಷಿ ತಡೆಯದೇ ಆನಂದ ಭಾಷ್ಪ ಸುರಿಸಿದರು. ಲಿಂಗಸೂರಿನ ವಿದ್ಯಾರ್ಥಿನಿ ನಿಖಿತಾ ಮಾತನಾಡಿ, ಅಪ್ಪ ವಕೀಲಿ ವೃತ್ತಿ ಮಾಡುತ್ತಾರೆ.ಆದರೆ ಅವರ ಆಸೆಯಂತೆ ನಾನು ವೈದ್ಯಳಾಗುತ್ತೇನೆ.ಆಕ್ಸಫರ್ಡ್ ಸಂಸ್ಥೆಯಲ್ಲಿ ಓದುವುದಕ್ಕೆ ಸಿಕ್ಕಿರುವ ಅವಕಾಶವನ್ನು ಸದುಪಯೋಗಮಾಡಿಕೊಳ್ಳುತ್ತೇನೆ ಎಂದರು.ಟಾಪರ್‌ಗಳಾದ ಶಹಾಪೂರದ ಅಮನ್, ಕಾರ್ತಿಕ್ ಬೆನ್ನೂರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಹಲವು ಬಡ ವಿದ್ಯಾರ್ಥಿಗಳ ಕಣ್ಣಲ್ಲಿ ನೀರು ಜೀನುಗಿತು.ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿAದ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವತ್ರಿಕವಾಗಿ ಕೊಟ್ಟ ವಿದ್ಯಾರ್ಥಿವೇತನದ ಮಾತು ಸಂಸ್ಥೆಯವರು ಉಳಿಸಿಕೊಂಡು ಪಾಲಕರ ನಂಬಿಕೆಗೆ ಪಾತ್ರರಾದರು ಎಂಬ ಮಾತುಗಳು ಕೇಳಿ ಬಂದವು.

ವರದಿ ಮಾಡಿದ್ದು ನಿಮ್ಮ ಡಿಸಿಜಿ ನ್ಯೂಸ್ :
ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ನಡೆಸಿದ್ದ ಸಂಸ್ಥೆಯವರು ಅಂದು 3550 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದ್ದರೂ ಬಹುಮಾನಕ್ಕೆ ಯಾರನ್ನೂ ಆಯ್ಕೆ ಮಾಡಿರಲಿಲ್ಲ.ಇದನ್ನು ನಿಮ್ಮ ಡಿಸಿಜಿ ನ್ಯೂಸ್ ವರದಿ ಮಾಡಿತ್ತು.ಅಲ್ಲದೇ ಸಾರ್ವತ್ರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂಬ ಕಿವಿಮಾತನ್ನು ಸಂಸ್ಥೆಯವರ ಗಮನಕ್ಕೆ ತಂದಿತ್ತು.ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ್ ಅವರು ಪ್ರತ್ಯೇಕ ಸಮಾರಂಭವ,ಸ್ಪರ್ಧೆ ಏರ್ಪಡಿಸಿ ಯಾರಿಗೂ ಅನ್ಯಾಯವಾಗದಂತೆ ವಿದ್ಯಾರ್ಥಿಗಳ ಸ್ನೇಹಿ ನಿರ್ಧಾರ ಕೈಗೊಂಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ