A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು