A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ