A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ