A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ