A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ