A teacher who arranged a bus to the last village of the district

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು.

ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿಯವರು, ಗ್ರಾಮಸ್ಥರ ಸಹಕಾರದಿಂದ ಘಟಕ ವ್ಯವಸ್ಥಾಪಕರು ಸುರಪುರ ಇವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಘಟಕ ವ್ಯವಸ್ಥಾಪಕರು ಕೇವಲ 15 ದಿನಗಳಲ್ಲಿ ಬಸ್ಸಾಪುರ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಿದರು. ಹೀಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ವಿಶೇಷವಾಗಿ ಬೇರೆ ಗ್ರಾಮದಲ್ಲಿ ಶಾಲೆಗೆ ದಾಖಲಾದ ಹೆಣ್ಣು ಮಕ್ಕಳು ಬಹಳಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಮತ್ತು ಸಂಗಮೇಶ ದಳವಾಯಿ ಸರ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಬಸ್ಸನ್ನು ಟೆಂಗಿನ ಗರಿಗಳಿಂದ ಅಲಂಕಾರಿಸಿ ಪೂಜೆ ಮಾಡುವಲಾಯಿತು. ಹಾಗೂ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಇವರಿಗೆ ‌ಶಾಲು ಹಾಗೂ ಹಾರ ಹಾಕುವ ಮೂಲಕ ಸನ್ಮಾನಿಸಲಾಯಿತು.
ಗ್ರಾಮಕ್ಕೆ ಬಸ್ಸು ಬರಲು ಸತತ ಪ್ರಯತ್ನ ಮಾಡಿದ ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ನಿಂಗಪ್ಪ ಕೊಂಡೇಕಾರ, ನೀಲಕಂಠ ಕೊಂಡೇಕಾರ, ಸಿದ್ದಪ್ಪ ಬಿರಾದಾರ, ಶಂಕ್ರಪ್ಪ ಕೊಂಡೇಕಾರ, ಸುರೇಶ ಬಿರಾದಾರ, ಪವನ್ ಕೊಂಡೇಕಾರ, ಯಮನಪ್ಪ ಜೈನಾಪುರ ಹಾಗೂ ಇತರರು ಉಪಸ್ಥಿತರಿದ್ದರು.

ಈ ಗ್ರಾಮದ ಜನರು ರೈತರು ಮತ್ತು ಕೂಲಿ ಕೆಲಸಗಾರರು. ಇವರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಕ್ಕಾಗಿ ಹೆಚ್ಚಿನ ಹಣವನ್ನು ನೀಡಿ ಹಾಸ್ಟೆಲ್ ಇರುವ ಶಾಲೆಗಳಿಗೆ, ಇಲ್ಲವೆ ತಮ್ಮ ಸಂಬಂಧಿಕರು ಇರುವ ಊರುಗಳಲ್ಲಿನ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ನಾನು ಹೇಗಾದರೂ ಮಾಡಿ ಈ ಊರಿಗೆ ಬಸ್ಸಿನ ವ್ಯವಸ್ಥೆ ಮಾಡಲೇಬೇಕು ಎಂದು ನಿರ್ಧರಿಸಿದೆನು. ಗ್ರಾಮಸ್ಥರ ಸಹಕಾರದಿಂದ ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿದ ಘಟಕ ವ್ಯವಸ್ಥಾಪಕರಾದ ಶ್ರೀ ಭೀಮಪ್ಪ ರಾಠೋಡ ಸಾಹೇಬರಿಗೆ ಹಾಗೂ ಶ್ರೀ ಸಂಗಣ್ಣ ದಳವಾಯಿ ಸರ್ ಅವರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಶ್ರೀ ನೀಲಪ್ಪ ತೆಗ್ಗಿ ಶಿಕ್ಷಕರು ಬಸ್ಸಾಪೂರ

ನಮ್ಮೂರಿಗೆ ಬಸ್ಸಿನ ಅವಶ್ಯಕತೆ ಬಹಳಷ್ಟು ಇತ್ತು. ನಮ್ಮೂರ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಇವರ ಸತತ ಪ್ರಯತ್ನದಿಂದಾಗಿ, ನಮ್ಮೂರಿಗೆ ಇಂದು ಬಸ್ಸಿನ ವ್ಯವಸ್ಥೆಯಾಗಿದೆ. ಅದಕ್ಕಾಗಿ ಶಿಕ್ಷಕರಾದ ಶ್ರೀ ನೀಲಪ್ಪ ತೆಗ್ಗಿ ಸರ್ ಇವರಿಗೆ ನಮ್ಮ ಮಕ್ಕಳ ಮತ್ತು ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಶ್ರೀ ನಿಂಗಪ್ಪ ಕೊಂಡೇಕಾರ. ಶ್ರೀ ನೀಲಕಂಠ ಕೊಂಡೇಕಾರ. ಬಸ್ಸಾಪೂರ.

ಬಸ್ ಬರುವ ಸಮಯ: ಹುಣಸಗಿ ಯಿಂದ ಹೊರಟು ಕೊಡೇಕಲ್ಲ, ಮಾರನಾಳ, ಯಣ್ಣೀವಡಗೇರಿಯಿಂದ ಒಳಗಡೆ 4 ಕಿಲೋ ಮೀಟರ್ ದೂರದಲ್ಲಿರುವ ಬಸ್ಸಾಪೂರಕ್ಕೆ ಬೆಳಿಗ್ಗೆ 7. 30 ಕ್ಕೆ ಹಾಗೂ ಸಾಯಂಕಾಲ 4.30 ಕ್ಕೆ ಬಂದು ನಾಲತ್ವಾಡಕ್ಕೆ ಹೊಗುತ್ತದೆ.

ವರದಿಗಾರ : ಶಿವು ರಾಠೋಡ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ