A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು