A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ