A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ