A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ