A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ