A woman weighs 17 kg from the womb. ESIC hospital doctors who removed the tumor

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ ಮತ್ತು ಆಂಕೋಸರ್ಜನ್ ಡಾ. ಹೇಮಂತ್. ಎಸ್. ಗಾಲಿಗೆ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ ಚಿಕಿತ್ಸೆ ನಡೆಸಲಾಗಿದೆ.
48 ವರ್ಷದ ಎರಡು ಮಕ್ಕಳ ತಾಯಿಯಾದ ಮಹಿಳೆ 8 ತಿಂಗಳಿಂದ ಹೊಟ್ಟೆಯಲ್ಲಿ ಕಾಣಿಸಿಕೊಂಡ ಉಬ್ಬರವನ್ನು ಗ್ಯಾಸ್ಟಿಕ್ ತೊಂದರೆ ಎಂದುಕೊಂಡು ಆಯುರ್ವೇದ ಔಷಧ ಸೇವಿಸುತ್ತಿದ್ದರು. ಕಳೆದ 4-5 ತಿಂಗಳಿಂದ ಹೊಟ್ಟೆ ಉಬ್ಬರ ಅಧಿಕವಾದರೂ ರೋಗಿಯು ಮಾತ್ರೆಯನ್ನೇ ಮುಂದುವರಿಸಿದ್ದರು.

ರೋಗಿಯ ಪ್ರಕಾರ ಕಳೆದ ಒಂದುವರೆ ವರ್ಷದಿಂದ ಸರಿಯಾಗಿ ಋತುಚಕ್ರ ಆಗುತ್ತಿರಲಿಲ್ಲ. ಹೊಟ್ಟೆ ಉಬ್ಬರದ ಒತ್ತಡ ಸಮಸ್ಯೆಗಳು, ಮಲಮೂತ್ರ, ಉಸಿರಾಟದ ತೊಂದರೆಗಳು ಕಾಣಿಸಿರುವುದಿಲ್ಲ. ಆದರೆ ಈಕೆ ಅಧಿಕ ರಕ್ತೊದೊತ್ತಡ ಹೊಂದಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ರೋಗಿಯನ್ನು ತಪಾಸಣೆ ಮಾಡುವಾಗ, ರೋಗಿಯ ಹೊಟ್ಟೆಯು (3 ಮಕ್ಕಳ ಗಾತ್ರದ) ಗರ್ಬಿಣಿ ಹೊಟ್ಟೆಯ ರೀತಿಯಲ್ಲಿದ್ದು, ನೀರು ತುಂಬಿದ ಗಡ್ಡೆಯ ಸ್ಥಿತಿಯಲ್ಲಿರುವುದು ಕಂಡು ಬಂತು. ಯೋನಿ ಹಾಗೂ ಗರ್ಭಕೋಶವನ್ನು ಪರೀಕ್ಷಿಸಿದಾಗ ಗರ್ಭಕೋಶದ ಕಂಠವು ಸಹಜರೀತಿಯಲ್ಲಿದ್ದು ಗಡ್ಡೆಯು ಗರ್ಭಕೋಶವನ್ನು ಎಳೆದಿರುವ ಲಕ್ಷಣಗಳು ಕಂಡು ಬಂತು. ಹೊಟ್ಟೆಯ ಅಲ್ಪಾಸೌಂಡ್ ಇಮೇಜಿಂಗ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು.

ಜೂನ್‌ 24 ರಂದು ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದಾಗ ದೊಡ್ಡಗಾತ್ರದ ನೀರು ತುಂಬಿದ ಗಡ್ಡೆ ಕಂಡು ಬಂತು. 17 ಕೆ.ಜಿ. ಗಡ್ಡೆಯು ಗರ್ಭಕೋಶದ ಮುಂದಿನ ಪದರದಲ್ಲಿತ್ತು. ರೋಗಿಯ ಎರಡು ಅಂಡಾಶಯಗಳು ಸಹಜ ಸ್ಥಿತಿಯಲ್ಲಿದ್ದವು. ಗಡ್ಡೆಯ ಸುತ್ತಮುತ್ತಲಿನ ಅಂಗಾಗಳು ಸಹಜ ಸ್ಥಿತಿಯಲ್ಲಿತ್ತು. ಗಡ್ಡೆಯನ್ನು ಹಿಸ್ಟೋಪಾಥಾಲಜಿಯ ಪರೀಕ್ಷೆಗೆ ಒಳಪಡಿಸಿದಾಗ ಗಡ್ಡೆಯು ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ಎಂದು ದೃಢೀಕರಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಯು ಸಹಜ ಸ್ಥಿತಿಯಲ್ಲಿದ್ದು ಚಿಕಿತ್ಸೆಗೆ ಸ್ವಂದಿಸುತ್ತಿದ್ಧಾರೆ. ಫೈಬ್ರಾಯ್ಡ್ ಗಡ್ಡೆಯು ಸಾಮಾನ್ಯ ವಾಗಿ 20-30% ಮಹಿಳೆಯರಲ್ಲಿ ಕಂಡು ಬರುತ್ತದೆ. 40 ರಿಂದ 80ರಷ್ಟು ಮಹಿಳೆಯರಲ್ಲಿ ಈ ಫೈಬ್ರಾಯ್ಡ್‌ ಗಡ್ಡೆಯ ಬೆಳವಣಿಗೆ ಸಾಮಾನ್ಯ. ಕೆಲವರು ಏನೂ ರೋಗ ಲಕ್ಷಣಗಳನ್ನು ಹೊಂದಿರುವುದೇ ಇಲ್ಲ. ಆದರೆ ಫೈಬ್ರಾಯ್ಡ್‌ ಗಡ್ಡೆ ದೊಡ್ಡದಾಗಿ ಬೆಳೆಯುತ್ತಿದ್ದರೆ ಕೆಲವೊಂದು ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಸಿಸ್ಟಿಕ್‌ ಡಿಜನೆರೇಷನ್‌ ಫೈಬ್ರಾಯ್ಡ್ ತೊಡಕು 4% ಮಹಿಳೆಯರಲ್ಲಿ ಕಂಡುಬರುತ್ತದೆ
ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೋನಿಯ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ ಪಿಜಿ ವಿದ್ಯಾರ್ಥಿನಿ ಡಾ. ಅಹಲ್ಯಾ, ಅರವಳಿಕೆ ತಜ್ಞರಾದ ಡಾ. ಲಕ್ಷ್ಮಿ ಮತ್ತು ತಂಡ. ದಾದಿಯರಾದ ವಂದನಾ ಅವರು ಶಸ್ತ್ತ ಚಿಕಿತ್ಸೆಯಲ್ಲಿ ಭಾಗವಹಿಸಿದ್ದರು. ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಮತ್ತು ಡಾ. ಅಶೋಕ್ ಕುಮಾರ್, ಡೀನ್: ಡಾ. ಸಂಧ್ಯಾ. ಆರ್ ಮತ್ತು ಚಿಕಿತ್ಸಾ ಅಧೀಕ್ಷಕರಾದ ಡಾ. ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ