Abortion sounds again in Bagalkot

ಬಾಗಲಕೋಟೆಯಲ್ಲಿ ಮತ್ತೆ ಗರ್ಭಪಾತದ ಸದ್ದು..! ಹೆಣ್ಣೆಂದು ಗರ್ಭಪಾತ ಮಾಡಿಸಿದಾಗ ಗಂಡು ಮಗು ಪತ್ತೆ..!

ಬಾಗಲಕೋಟೆಯಲ್ಲಿ ಮತ್ತೆ ಗರ್ಭಪಾತದ ಸದ್ದು..! ಹೆಣ್ಣೆಂದು ಗರ್ಭಪಾತ ಮಾಡಿಸಿದಾಗ ಗಂಡು ಮಗು ಪತ್ತೆ..!

ಬಾಗಲಕೋಟೆ: ಗರ್ಭಪಾತದಿಂದ ಮಹಾರಾಷ್ಟ್ರದ ಮಿರಜ್ ಮೂಲದ ಗೃಹಿಣಿಯೊಬ್ಬಳು ಮೃತಪಟ್ಟ ಘಟನೆ ಇನ್ನೂ ಹಸಿರಿರುವಾಗಲೇ ಮತ್ತೊಂದು ಗರ್ಭಪಾತ ಪ್ರಕರಣ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ವರದಿಯಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದ್ದು, ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ಗೊತ್ತಾಗಿದೆ.

ಪಟ್ಟಣದ ಪಾಟೀಲ್ ಆಸ್ಪತ್ರೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ದ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ ಎಂದು ಹೇಳಲಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆ ಡಿಹೆಚ್‌ಓ ಸುವರ್ಣ ಕುಲಕರ್ಣಿ ಹಾಗೂ ಮುಧೋಳ ಟಿಹೆಚ್‌ಒ ಮಲಘಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಕ್ಷಣ ಡೆಲಿವರಿ ಥಿಯೇ ಟರ್, ಸ್ಕ್ಯಾನಿಂಗ್ ಸೆಂಟರ್, ಎಮ್‌ರ್ಆಡಿ ರೂಮ್ ಸೀಜ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರ ಮಹಿಳೆ ಅಸುನೀಗಿದ್ದಳು. ಹೀಗಾಗಿ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಅಧಿಕಾರಿಗಳ ಭೇಟಿ, ಪರಿಶೀಲನೆ:

ಗರ್ಭಪಾತ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಡಿಎಚ್‌ಒ ಸುವರ್ಣ ಕುಲಕರ್ಣಿ, ಮುಧೋಳ ಟಿಎಚ್‌ಒ ಮಲಘಾಣ ಅವರು ಆಸತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಯೋಗ ಮೆಚ್ಚುಗೆ:

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಪಾಟೀಲ್ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆದ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ಹಠಾತ್ ಕುಟುಕು ಕಾರ್ಯಾಚರಣೆ ಮಾಡಿ ಸ್ಕ್ಯಾನಿಂಗ್ ರೂಂ, ಹೇರಿಗೆ ಕೋಣೆಗಳು ಸೀಜ್ ಮಾಡಿರುವ ಕ್ರಮಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದ್ದಾರೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ