Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಗೂಡ್ಸ್ ಅಟೋ ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ ಅಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕವಡಿಮಟ್ಟಿ-ಹಿರೇಮುರಾಳ ಮಧ್ಯೆದಲ್ಲಿ ಬರುವ ಡಾಂಬರ್ ಪ್ಲಾಂಟ್ ಹತ್ತಿರ ಶನಿವಾರ ನಡೆದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಘಟನೆಯಲ್ಲಿ ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದ ಕರಿಯಪ್ಪ ಡಿ.ನಾಲತವಾಡ(55) ಸ್ಥಳದಲ್ಲೇ ಅಸುನೀಗಿದರು. ಗೂಡ್ಸ್ ಆಟೋ ಚಾಲಕ ಯಮನಪ್ಪ ಜಗಂಡಭಾವಿ ಅವರಿಗೆ ಗಂಭೀರ ಗಾಯಗಳಾಗಿದ್ದು ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟಿದ್ದ ಕರಿಯಪ್ಪ ನಾಲತವಾಡ, ಒಂದು ವಾರಕ್ಕಾಗುಷ್ಟು ಕಿರಾಣಿ ಸಂತೆಯನ್ನು ಖರೀದಿಸಿಕೊಂಡು ಆಟೋದಲ್ಲಿ ಹಾಕಿಕೊಂಡು ತಮ್ಮೂರಿನತ್ತ ಹೊರಟಿದ್ದ ವೇಳೆ ಹಿರೇಮುರಾಳ-ಕವಡಿಮಟ್ಟ ಮಾರ್ಗ ಮಧ್ಯೆ ಯಮನ ರೂಪದಲ್ಲಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಅವರ ಜೀವನದ ಸಂತೆಯನ್ನೇ ಮುಗಿಸಿದ್ದು ಎಂಥವರನ್ನು ಮರುಗುವಂತೆ ಮಾಡಿತು.

ಘಟನಾ ಸ್ಥಳದಲ್ಲಿ ಜೀರಾ ಸೋಡಾ ಬಾಟಲಿಗಳು, ಶೇಂಗಾ, ರವೆ, ಅವಲಕ್ಕಿ, ಇನ್ನೂ ಗಂಟು ಬಿಚ್ಚದೇ ಇದ್ದ ಬಳ್ಳೊಳ್ಳಿ,ಶೇಂಗಾ ಇನ್ನೀತರ ಸಾಮಗ್ರಿ ಇದ್ದ ಚೀಲದ ಮೇಲಿನ ರಕ್ತದ ಹನಿಗಳು ಘಟನೆಯ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು.

ಅಟೋ ಚಾಲಕ ಯಮನಪ್ಪ ಜಗಂಡಭಾವಿ ಪರಿಸ್ಥಿತಿ ಗಂಭೀರವಾಗಿದ್ದು ಅವರ ತಾಯಿ ಮಗನ ಪರಿಸ್ಥಿತಿಗೆ ಕಣ್ಣೀರು ಹಾಕುತ್ತಿದ್ದಾರೆ.ಅಪಘಾತಕ್ಕೀಡಾದ ಆಟೋದ ಮೇಲೆ ಹುಟ್ಟು ಉಚಿತ, ಸಾವು ಖಚಿತ, ನೀನೇ ಶಾಶ್ವತ ಬರಹ ಮಾರ್ಗ ಮಧ್ಯೆದಲ್ಲಿನ ಜನರ ಗಮನ ಸೆಳೆಯಿತು.

ಪಿಎಸ್‌ಐ ಸಂಜಯ ತಿಪರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Gold Price Today : ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್!

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು