Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

Accident: ಬದುಕಿನ ಸಂತೆ ಮುಗಿಸಿದ ವ್ಯಾಪಾರಿ: ಗೂಡ್ಸ್ ಅಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಗೂಡ್ಸ್ ಅಟೋ ಹಾಗೂ ಕ್ಯಾಂಟರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ ಅಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕವಡಿಮಟ್ಟಿ-ಹಿರೇಮುರಾಳ ಮಧ್ಯೆದಲ್ಲಿ ಬರುವ ಡಾಂಬರ್ ಪ್ಲಾಂಟ್ ಹತ್ತಿರ ಶನಿವಾರ ನಡೆದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಘಟನೆಯಲ್ಲಿ ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟುಕೊಂಡಿದ್ದ ಕರಿಯಪ್ಪ ಡಿ.ನಾಲತವಾಡ(55) ಸ್ಥಳದಲ್ಲೇ ಅಸುನೀಗಿದರು. ಗೂಡ್ಸ್ ಆಟೋ ಚಾಲಕ ಯಮನಪ್ಪ ಜಗಂಡಭಾವಿ ಅವರಿಗೆ ಗಂಭೀರ ಗಾಯಗಳಾಗಿದ್ದು ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚವನಬಾವಿಯಲ್ಲಿ ಕಿರಾಣಿ ಅಂಗಡಿಯನ್ನಿಟ್ಟಿದ್ದ ಕರಿಯಪ್ಪ ನಾಲತವಾಡ, ಒಂದು ವಾರಕ್ಕಾಗುಷ್ಟು ಕಿರಾಣಿ ಸಂತೆಯನ್ನು ಖರೀದಿಸಿಕೊಂಡು ಆಟೋದಲ್ಲಿ ಹಾಕಿಕೊಂಡು ತಮ್ಮೂರಿನತ್ತ ಹೊರಟಿದ್ದ ವೇಳೆ ಹಿರೇಮುರಾಳ-ಕವಡಿಮಟ್ಟ ಮಾರ್ಗ ಮಧ್ಯೆ ಯಮನ ರೂಪದಲ್ಲಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಅವರ ಜೀವನದ ಸಂತೆಯನ್ನೇ ಮುಗಿಸಿದ್ದು ಎಂಥವರನ್ನು ಮರುಗುವಂತೆ ಮಾಡಿತು.

ಘಟನಾ ಸ್ಥಳದಲ್ಲಿ ಜೀರಾ ಸೋಡಾ ಬಾಟಲಿಗಳು, ಶೇಂಗಾ, ರವೆ, ಅವಲಕ್ಕಿ, ಇನ್ನೂ ಗಂಟು ಬಿಚ್ಚದೇ ಇದ್ದ ಬಳ್ಳೊಳ್ಳಿ,ಶೇಂಗಾ ಇನ್ನೀತರ ಸಾಮಗ್ರಿ ಇದ್ದ ಚೀಲದ ಮೇಲಿನ ರಕ್ತದ ಹನಿಗಳು ಘಟನೆಯ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು.

ಅಟೋ ಚಾಲಕ ಯಮನಪ್ಪ ಜಗಂಡಭಾವಿ ಪರಿಸ್ಥಿತಿ ಗಂಭೀರವಾಗಿದ್ದು ಅವರ ತಾಯಿ ಮಗನ ಪರಿಸ್ಥಿತಿಗೆ ಕಣ್ಣೀರು ಹಾಕುತ್ತಿದ್ದಾರೆ.ಅಪಘಾತಕ್ಕೀಡಾದ ಆಟೋದ ಮೇಲೆ ಹುಟ್ಟು ಉಚಿತ, ಸಾವು ಖಚಿತ, ನೀನೇ ಶಾಶ್ವತ ಬರಹ ಮಾರ್ಗ ಮಧ್ಯೆದಲ್ಲಿನ ಜನರ ಗಮನ ಸೆಳೆಯಿತು.

ಪಿಎಸ್‌ಐ ಸಂಜಯ ತಿಪರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Gold Price Today : ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್!

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.