Accident: Mother-in-law, son-in-law, three died, the condition of four is critical

Accident: ಅತ್ತೆ, ಅಳಿಯ ಸೇರಿ ಮೂವರು ಸಾವು, ನಾಲ್ವರ ಸ್ಥಿತಿ ಚಿಂತಾಜನಕ

Accident: ಅತ್ತೆ, ಅಳಿಯ ಸೇರಿ ಮೂವರು ಸಾವು, ನಾಲ್ವರ ಸ್ಥಿತಿ ಚಿಂತಾಜನಕ

ಚಿಕ್ಕಬಳ್ಳಾಪುರ; ಲಾರಿ ಮತ್ತು ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮೃತರನ್ನು ಕೋಲಾರ ಮೂಲದ ಅತ್ತೆ ರಾಜೀಯಾ ಶಾಹಿನ್ (50 ವರ್ಷ), ಅಳಿಯ ಮೇಹಿಮುದುಲ್ (43 ವರ್ಷ) ಹಾಗೂ ಮ್ಲೋಲ್ಲಾನಾ ಶಾಹನ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನೂ ಕೋಲಾರದಿಂದ ಟಾಟಾ ಸುಮೋ ಕಾರಿನಲ್ಲಿ ಇಂದು ಪೆನುಗೊಂಡ ದರ್ಗಾಗೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಟಾಟಾ ಸುಮೋ ಹಾಗೂ ಲಾರಿ ನಡುವೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಕಾರು ಚಾಲಕನ ಅಜಾಗರುಕತೆಯ ಚಾಲನೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಡಿಕ್ಕಿಯ ತೀವ್ರತೆಯಿಂದಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಒಬ್ಬನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇನ್ನುಳಿದ ನಾಲ್ಕು ಜನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ಕೂಡ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರ ಆರೋಗ್ಯದ ಮೇಲೆ ಹೆಚ್ಚಿನ ಕಳವಳ ಇಲ್ಲ ಎಂದು ತಿಳಿದು ಬಂದಿದೆ.

ಅಪಘಾತಕ್ಕೀಡಾದವರು ಬಿಹಾರ ಮೂಲದವರಾಗಿದ್ದು, ಕೋಲಾರದ ದರ್ಗಾದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕುಟುಂಬ ಸಮೇತರಾಗಿ ಕೋಲಾರದಿಂದ ಪೆನುಗೊಂಡ ಕಡೆಗೆ ಪ್ರಯಾಣಿಸುತ್ತಿದ್ದರು.

ಇದನ್ನೂ ಓದಿ: KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ

ಇನ್ನೂ ದುರ್ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳೀಯ ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ