Accident news: A lorry collided with a tractor carrying Ganapana Murthy in Koppal: the condition of four is critical

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

ಕೊಪ್ಪಳ: ಟ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಕೋಳೂರು ಕ್ರಾಸ್ ಬಳಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿಯೂ ನೆಲಕ್ಕುರುಳಿದೆ‌. ಅದೇ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ‌‌.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ‌.

ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21),‌ ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಎಂದು ಗುರುತಿಸಲಾಗಿದೆ.

ಮೂಲತಃ ಇಳಕಲ್ಲ ನಗರ ನಿವಾಸಿಗಳಾದ ಮೃತರು ಅಣ್ಣ-ತಮ್ಮ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಣೇಶ ಚತುರ್ಥಿಗಾಗಿ ಬಾಗಲಕೋಟೆಯಿಂದ ಇಳಕಲ್ ನಗರಕ್ಕೆ ಬೈಕ್ ಮೇಲೆ ಸಹೋದರರು ಬರುವಾಗ ಪೆಟ್ರೋಲ್ ಖಾಲಿಯಾಗಿ, ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದು ಸಹೋದರರಿಬ್ಬರೂ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ