Accident news: A lorry collided with a tractor carrying Ganapana Murthy in Koppal: the condition of four is critical

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

ಕೊಪ್ಪಳ: ಟ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಕೋಳೂರು ಕ್ರಾಸ್ ಬಳಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿಯೂ ನೆಲಕ್ಕುರುಳಿದೆ‌. ಅದೇ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ‌‌.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ‌.

ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21),‌ ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಎಂದು ಗುರುತಿಸಲಾಗಿದೆ.

ಮೂಲತಃ ಇಳಕಲ್ಲ ನಗರ ನಿವಾಸಿಗಳಾದ ಮೃತರು ಅಣ್ಣ-ತಮ್ಮ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಣೇಶ ಚತುರ್ಥಿಗಾಗಿ ಬಾಗಲಕೋಟೆಯಿಂದ ಇಳಕಲ್ ನಗರಕ್ಕೆ ಬೈಕ್ ಮೇಲೆ ಸಹೋದರರು ಬರುವಾಗ ಪೆಟ್ರೋಲ್ ಖಾಲಿಯಾಗಿ, ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದು ಸಹೋದರರಿಬ್ಬರೂ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

Latest News

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ ಪಾಟೀಲ(ಇಂಗಳಗೇರಿ) ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮುದ್ದೇಬಿಹಾಳ ಬಂದ್ ಕರೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವ್ಯಾಪಾರಸ್ಥರಿoದ ಹಮ್ಮಿಕೊಂಡಿದ್ದ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ