Accident news: A lorry collided with a tractor carrying Ganapana Murthy in Koppal: the condition of four is critical

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

ಕೊಪ್ಪಳ: ಟ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಕೋಳೂರು ಕ್ರಾಸ್ ಬಳಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿಯೂ ನೆಲಕ್ಕುರುಳಿದೆ‌. ಅದೇ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ‌‌.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ‌.

ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21),‌ ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಎಂದು ಗುರುತಿಸಲಾಗಿದೆ.

ಮೂಲತಃ ಇಳಕಲ್ಲ ನಗರ ನಿವಾಸಿಗಳಾದ ಮೃತರು ಅಣ್ಣ-ತಮ್ಮ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಣೇಶ ಚತುರ್ಥಿಗಾಗಿ ಬಾಗಲಕೋಟೆಯಿಂದ ಇಳಕಲ್ ನಗರಕ್ಕೆ ಬೈಕ್ ಮೇಲೆ ಸಹೋದರರು ಬರುವಾಗ ಪೆಟ್ರೋಲ್ ಖಾಲಿಯಾಗಿ, ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದು ಸಹೋದರರಿಬ್ಬರೂ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

Latest News

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ. ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ